<p><strong>ಬೆಂಗಳೂರು</strong>: 15ನೇ ಹಣಕಾಸು ಆಯೋಗದ ವ್ಯಾಪ್ತಿ ಮತ್ತು ಉದ್ದೇಶದ ಕುರಿತು ಚರ್ಚಿಸಲು ಇದೇ 10ರಂದು ಕೇರಳ ಸರ್ಕಾರ ಆಯೋಜಿಸಿರುವ ದಕ್ಷಿಣ ರಾಜ್ಯಗಳ ಸಭೆಯಲ್ಲಿ ಕರ್ನಾಟಕ ಕೂಡಾ ಭಾಗವಹಿಸಲಿದೆ ಎಂದು ಕೃಷಿ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.</p>.<p>‘ತಿರುವನಂತಪುರದಲ್ಲಿ ಈ ಸಭೆಯಲ್ಲಿ ನಡೆಯಲಿದೆ. ಅಭಿವೃದ್ಧಿ ಪಥದಲ್ಲಿರುವ ರಾಜ್ಯಗಳ ಹಿತಾಸಕ್ತಿ ಮೇಲೆ ಆಯೋಗದ ಮಾರ್ಗಸೂಚಿ ಪರಿಣಾಮ ಉಂಟು ಮಾಡಲಿದೆ. ಅದರಲ್ಲೂ ದಕ್ಷಿಣ ರಾಜ್ಯಗಳ ಮೇಲೆ ಹೆಚ್ಚಿನ ಪರಿಣಾಮ ಆಗಲಿದೆ. ಹೀಗಾಗಿ, ತಿದ್ದುಪಡಿ ಮಾಡುವಂತೆ ಒತ್ತಾಯಿಸಲಾಗುವುದು’ ಎಂದು ಮಾಧ್ಯಮಗೋಷ್ಠಿಯಲ್ಲಿ ಹೇಳಿದ್ದಾರೆ.</p>.<p>‘ದಕ್ಷಿಣ ರಾಜ್ಯಗಳ ಸಾಧನೆಗಳನ್ನು ಪರಿಗಣಿಸಿ ಕೇಂದ್ರ ಸರ್ಕಾರವು ರಾಜ್ಯಗಳಿಗೆ ಸಮರ್ಪಕವಾಗಿ ತೆರಿಗೆ ವರಮಾನ ಹಂಚಿಕೆ ಮಾಡುತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇತ್ತೀಚೆಗೆ ಪ್ರತಿಪಾದಿಸಿದ್ದರು. ಕೇರಳ ಹಣಕಾಸು ಸಚಿವ ಥೋಮಸ್ ಐಸಾಕ್ ಅವರು ಸಭೆ ಆಯೋಜಿಸಲು ಇದೂ ಕಾರಣವಾಗಿದೆ.</p>.<p>‘ರಾಜ್ಯಗಳಲ್ಲಿರುವ ಜನಸಂಖ್ಯೆ ಆಧರಿಸಿ ಆಯೋಗ ಹಣ ಹಂಚಿಕೆ ಮಾಡಲು ಉದ್ದೇಶಿಸಿದೆ. ಈ ಹಿಂದಿನ ಎಲ್ಲ ಆಯೋಗಗಳು 1971ರ ಜನಗಣತಿ ಆಧರಿಸಿ ಹಣ ಹಂಚಿಕೆ ಮಾಡಿವೆ. ಆದರೆ, 2011ರಲ್ಲಿ ಪರಿಸ್ಥಿತಿ ಬದಲಾಗಿದೆ. ಜನಸಂಖ್ಯೆ ಆಧರಿಸಿ ಹಣ ಹಂಚಿಕೆ ಮಾಡಿದರೆ ದಕ್ಷಿಣ ರಾಜ್ಯಗಳಿಗೆ ಕಡಿಮೆ ಹಣ ಸಿಗಲಿದೆ. ಇದರಿಂದ ಅಭಿವೃದ್ಧಿ ವೇಗಕ್ಕೆ ಅಡ್ಡಿಯಾಗಲಿದೆ’ ಎಂದೂ ಅವರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: 15ನೇ ಹಣಕಾಸು ಆಯೋಗದ ವ್ಯಾಪ್ತಿ ಮತ್ತು ಉದ್ದೇಶದ ಕುರಿತು ಚರ್ಚಿಸಲು ಇದೇ 10ರಂದು ಕೇರಳ ಸರ್ಕಾರ ಆಯೋಜಿಸಿರುವ ದಕ್ಷಿಣ ರಾಜ್ಯಗಳ ಸಭೆಯಲ್ಲಿ ಕರ್ನಾಟಕ ಕೂಡಾ ಭಾಗವಹಿಸಲಿದೆ ಎಂದು ಕೃಷಿ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.</p>.<p>‘ತಿರುವನಂತಪುರದಲ್ಲಿ ಈ ಸಭೆಯಲ್ಲಿ ನಡೆಯಲಿದೆ. ಅಭಿವೃದ್ಧಿ ಪಥದಲ್ಲಿರುವ ರಾಜ್ಯಗಳ ಹಿತಾಸಕ್ತಿ ಮೇಲೆ ಆಯೋಗದ ಮಾರ್ಗಸೂಚಿ ಪರಿಣಾಮ ಉಂಟು ಮಾಡಲಿದೆ. ಅದರಲ್ಲೂ ದಕ್ಷಿಣ ರಾಜ್ಯಗಳ ಮೇಲೆ ಹೆಚ್ಚಿನ ಪರಿಣಾಮ ಆಗಲಿದೆ. ಹೀಗಾಗಿ, ತಿದ್ದುಪಡಿ ಮಾಡುವಂತೆ ಒತ್ತಾಯಿಸಲಾಗುವುದು’ ಎಂದು ಮಾಧ್ಯಮಗೋಷ್ಠಿಯಲ್ಲಿ ಹೇಳಿದ್ದಾರೆ.</p>.<p>‘ದಕ್ಷಿಣ ರಾಜ್ಯಗಳ ಸಾಧನೆಗಳನ್ನು ಪರಿಗಣಿಸಿ ಕೇಂದ್ರ ಸರ್ಕಾರವು ರಾಜ್ಯಗಳಿಗೆ ಸಮರ್ಪಕವಾಗಿ ತೆರಿಗೆ ವರಮಾನ ಹಂಚಿಕೆ ಮಾಡುತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇತ್ತೀಚೆಗೆ ಪ್ರತಿಪಾದಿಸಿದ್ದರು. ಕೇರಳ ಹಣಕಾಸು ಸಚಿವ ಥೋಮಸ್ ಐಸಾಕ್ ಅವರು ಸಭೆ ಆಯೋಜಿಸಲು ಇದೂ ಕಾರಣವಾಗಿದೆ.</p>.<p>‘ರಾಜ್ಯಗಳಲ್ಲಿರುವ ಜನಸಂಖ್ಯೆ ಆಧರಿಸಿ ಆಯೋಗ ಹಣ ಹಂಚಿಕೆ ಮಾಡಲು ಉದ್ದೇಶಿಸಿದೆ. ಈ ಹಿಂದಿನ ಎಲ್ಲ ಆಯೋಗಗಳು 1971ರ ಜನಗಣತಿ ಆಧರಿಸಿ ಹಣ ಹಂಚಿಕೆ ಮಾಡಿವೆ. ಆದರೆ, 2011ರಲ್ಲಿ ಪರಿಸ್ಥಿತಿ ಬದಲಾಗಿದೆ. ಜನಸಂಖ್ಯೆ ಆಧರಿಸಿ ಹಣ ಹಂಚಿಕೆ ಮಾಡಿದರೆ ದಕ್ಷಿಣ ರಾಜ್ಯಗಳಿಗೆ ಕಡಿಮೆ ಹಣ ಸಿಗಲಿದೆ. ಇದರಿಂದ ಅಭಿವೃದ್ಧಿ ವೇಗಕ್ಕೆ ಅಡ್ಡಿಯಾಗಲಿದೆ’ ಎಂದೂ ಅವರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>