‘ರಾಜ್ಯಗಳಲ್ಲಿರುವ ಜನಸಂಖ್ಯೆ ಆಧರಿಸಿ ಆಯೋಗ ಹಣ ಹಂಚಿಕೆ ಮಾಡಲು ಉದ್ದೇಶಿಸಿದೆ. ಈ ಹಿಂದಿನ ಎಲ್ಲ ಆಯೋಗಗಳು 1971ರ ಜನಗಣತಿ ಆಧರಿಸಿ ಹಣ ಹಂಚಿಕೆ ಮಾಡಿವೆ. ಆದರೆ, 2011ರಲ್ಲಿ ಪರಿಸ್ಥಿತಿ ಬದಲಾಗಿದೆ. ಜನಸಂಖ್ಯೆ ಆಧರಿಸಿ ಹಣ ಹಂಚಿಕೆ ಮಾಡಿದರೆ ದಕ್ಷಿಣ ರಾಜ್ಯಗಳಿಗೆ ಕಡಿಮೆ ಹಣ ಸಿಗಲಿದೆ. ಇದರಿಂದ ಅಭಿವೃದ್ಧಿ ವೇಗಕ್ಕೆ ಅಡ್ಡಿಯಾಗಲಿದೆ’ ಎಂದೂ ಅವರು ಹೇಳಿದ್ದಾರೆ.