ಜಮ್ಮು–ಕಾಶ್ಮೀರದ ಜನರು ಸ್ವಯಂ ನಿರ್ಣಯ ಮತ್ತು ಮೂಲಭೂತ ಹಕ್ಕನ್ನು ಕಳೆದುಕೊಂಡಿದ್ದಾರೆ ಎಂದು ಹೇಳಿದರು. ಅಂತರರಾಷ್ಟ್ರೀಯ ಸಮುದಾಯಕ್ಕೆ ಪಾಕಿಸ್ತಾನ ತನ್ನ ಜವಾಬ್ದಾರಿಗಳನ್ನು ನೆನಪಿಸುತ್ತದೆ. ಹಾಗೆಯೇ ವಿಶ್ವಸಂಸ್ಥೆ ಭದ್ರತಾ ಮಂಡಳಿಯ ನಿರ್ಣಯಗಳನ್ನು ಅನುಷ್ಠಾನಗೊಳಿಸುವ ಮೂಲಕ ಜಮ್ಮು ಮತ್ತು ಕಾಶ್ಮೀರ ಜನರಿಗೆ ನೀಡಿರುವ ಭರವಸೆಯನ್ನು ಈಡೇರಿಸುವಂತೆ ಅವರನ್ನು ಪ್ರೇರೇಪಿಸುತ್ತದೆ ಎಂದು ಹೇಳಿದರು.
**
ಮಥುರಾ : ಪಾಕಿಸ್ತಾನವನ್ನು ‘ವೃಣಕ್ಕೆ’ ಹೋಲಿಸಿರುವ ಉತ್ತರಪ್ರದೇಶ ಸಚಿವ ಶ್ರೀಕಾಂತ್ ಶರ್ಮಾ, ಭಾರತದ ಸೈನಿಕರ ಮೇಲೆ ಪಾಕಿಸ್ತಾನವು ಗುಂಡಿನ ದಾಳಿ ನಡೆಸಿದರೆ, ಪ್ರತಿಯಾಗಿ ಭಾರತವೂ ಗುಂಡಿನ ಮಳೆಗರೆಯಬೇಕು ಎಂದು ಕರೆ ನೀಡಿದ್ದಾರೆ.