<p><strong>ಹೈದರಾಬಾದ್:</strong> ತೆಲುಗು ಚಿತ್ರರಂಗದ ಬೇರೂರಿರುವ ಕಾಸ್ಟಿಂಗ್ ಕೌಚ್ (ಲೈಂಗಿಕ ಕಿರುಕುಳ) ಪ್ರವೃತ್ತಿಗೆ ಕಡಿವಾಣ ಹಾಕಬೇಕು ಎಂದು ಒತ್ತಾಯಿಸಿ ಟಾಲಿವುಡ್ ನಟಿ ಶ್ರೀರೆಡ್ಡಿ ಅವರು ತೆಲುಗು ಫಿಲ್ಮ್ ಛೇಂಬರ್ ಎದುರು ಶನಿವಾರ ಪ್ರತಿಭಟನೆ ನಡೆಸಿದರು.</p>.<p>ಮಾಧ್ಯಮಗಳ ಮುಂದೆಯೇ ಬಟ್ಟೆ ಕಳಚಿ ಅರೆನಗ್ನ ಪ್ರತಿಭಟನೆಗೆ ಮುಂದಾದಾಗ ಪೊಲೀಸರು ಅವರನ್ನು ವಶಕ್ಕೆ ಪಡೆದರು.<br /> <br /> ಚಿತ್ರರಂಗದ ಹಲವು ನಿರ್ಮಾಪಕರು, ನಿರ್ದೇಶಕರು ತಮಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಈ ಮೊದಲು ಆರೋಪಿಸಿದ್ದ ಅವರು, ಪ್ರತಿಭಟನೆಯ ಎಚ್ಚರಿಕೆ ನೀಡಿದ್ದರು.</p>.<p>ಶ್ರೀರೆಡ್ಡಿ ಜೊತೆ ವಾಣಿಜ್ಯ ಮಂಡಳಿಯ ಸದಸ್ಯರು ಮಾತುಕತೆಗೆ ಮುಂದಾದರೂ ಅವರು ಅದಕ್ಕೆ ಅವಕಾಶ ನೀಡಲಿಲ್ಲ.</p>.<p>‘ತಮ್ಮಂತೆ ಸಾಕಷ್ಟು ಮಂದಿಗೆ ಇಂತಹ ಕಹಿ ಅನುಭವಗಳಾಗಿವೆ. ಯುವತಿಯರಿಗೆ ದೈಹಿಕವಾಗಿ, ಮಾನಸಿಕವಾಗಿ ಕಿರುಕುಳ ನೀಡಲಾಗುತ್ತಿದೆ. ಅವರ ಮಾತಿಗೆ ಒಪ್ಪಿಕೊಳ್ಳದಿದ್ದರೆ ಅವಕಾಶಗಳು ಸಿಗುವುದಿಲ್ಲ. ಕಲಾವಿದರ ಸಂಘದ ಸದಸ್ಯತ್ವ ನೀಡದಂತೆಯೂ ತಡೆಯಲಾಗುತ್ತಿದೆ. ನೋವು ವ್ಯಕ್ತಪಡಿಸಲು ಉಳಿದಿದ್ದ ದಾರಿ ಇದೊಂದೇ’ ಎಂದು ಅವರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೈದರಾಬಾದ್:</strong> ತೆಲುಗು ಚಿತ್ರರಂಗದ ಬೇರೂರಿರುವ ಕಾಸ್ಟಿಂಗ್ ಕೌಚ್ (ಲೈಂಗಿಕ ಕಿರುಕುಳ) ಪ್ರವೃತ್ತಿಗೆ ಕಡಿವಾಣ ಹಾಕಬೇಕು ಎಂದು ಒತ್ತಾಯಿಸಿ ಟಾಲಿವುಡ್ ನಟಿ ಶ್ರೀರೆಡ್ಡಿ ಅವರು ತೆಲುಗು ಫಿಲ್ಮ್ ಛೇಂಬರ್ ಎದುರು ಶನಿವಾರ ಪ್ರತಿಭಟನೆ ನಡೆಸಿದರು.</p>.<p>ಮಾಧ್ಯಮಗಳ ಮುಂದೆಯೇ ಬಟ್ಟೆ ಕಳಚಿ ಅರೆನಗ್ನ ಪ್ರತಿಭಟನೆಗೆ ಮುಂದಾದಾಗ ಪೊಲೀಸರು ಅವರನ್ನು ವಶಕ್ಕೆ ಪಡೆದರು.<br /> <br /> ಚಿತ್ರರಂಗದ ಹಲವು ನಿರ್ಮಾಪಕರು, ನಿರ್ದೇಶಕರು ತಮಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಈ ಮೊದಲು ಆರೋಪಿಸಿದ್ದ ಅವರು, ಪ್ರತಿಭಟನೆಯ ಎಚ್ಚರಿಕೆ ನೀಡಿದ್ದರು.</p>.<p>ಶ್ರೀರೆಡ್ಡಿ ಜೊತೆ ವಾಣಿಜ್ಯ ಮಂಡಳಿಯ ಸದಸ್ಯರು ಮಾತುಕತೆಗೆ ಮುಂದಾದರೂ ಅವರು ಅದಕ್ಕೆ ಅವಕಾಶ ನೀಡಲಿಲ್ಲ.</p>.<p>‘ತಮ್ಮಂತೆ ಸಾಕಷ್ಟು ಮಂದಿಗೆ ಇಂತಹ ಕಹಿ ಅನುಭವಗಳಾಗಿವೆ. ಯುವತಿಯರಿಗೆ ದೈಹಿಕವಾಗಿ, ಮಾನಸಿಕವಾಗಿ ಕಿರುಕುಳ ನೀಡಲಾಗುತ್ತಿದೆ. ಅವರ ಮಾತಿಗೆ ಒಪ್ಪಿಕೊಳ್ಳದಿದ್ದರೆ ಅವಕಾಶಗಳು ಸಿಗುವುದಿಲ್ಲ. ಕಲಾವಿದರ ಸಂಘದ ಸದಸ್ಯತ್ವ ನೀಡದಂತೆಯೂ ತಡೆಯಲಾಗುತ್ತಿದೆ. ನೋವು ವ್ಯಕ್ತಪಡಿಸಲು ಉಳಿದಿದ್ದ ದಾರಿ ಇದೊಂದೇ’ ಎಂದು ಅವರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>