ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಾಸಕ ಜಿಗ್ನೇಶ್‌ ವಿರುದ್ಧ ಪ್ರಕರಣ ದಾಖಲು

Last Updated 7 ಏಪ್ರಿಲ್ 2018, 20:13 IST
ಅಕ್ಷರ ಗಾತ್ರ

ಕೊಪ್ಪಳ: ಗುಜರಾತ್‌ನ ವಡಗಾಂ ಶಾಸಕ ಜಿಗ್ನೇಶ್‌ ಮೇವಾನಿ ಹಾಗೂ ಸಂಘಟಕ ಹುಸೇನಪ್ಪ ಹಂಚಿನಾಳ ವಿರುದ್ಧ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪದ ಮೇಲೆ ಶನಿವಾರ ಪ್ರಕರಣ ದಾಖಲಾಗಿದೆ.

ಗಂಗಾವತಿಯಲ್ಲಿ ಏಪ್ರಿಲ್‌ 6 ರಂದು ‘ಸಂವಿಧಾನ ಉಳಿಸಿ ಕರ್ನಾಟಕ ಸಂಘಟನೆ’ಯು ಆಯೋಜಿಸಿದ್ದ ಸಭೆಯಲ್ಲಿ ಜಿಗ್ನೇಶ್‌ ಮಾತನಾಡಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಮತ ಹಾಕದಂತೆ ಕರೆ ನೀಡಿದ್ದರು. ನಂತರ ಸಭೆಯಲ್ಲಿ ಭಾಗವಹಿಸಿದ್ದವರಿಗೆ ಸಂಘಟಕರು ಹಣ ವಿತರಣೆ ಮಾಡಿದ್ದಾರೆ ಎಂದು ಆರೋಪಿಸಿ ಕ್ಷಿಪ್ರ ಪಡೆಯ ಅಧಿಕಾರಿ ದೂರು ನೀಡಿದ್ದು, ಗಂಗಾವತಿ ನಗರ ಠಾಣೆ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT