ಗಂಗಾವತಿಯಲ್ಲಿ ಏಪ್ರಿಲ್ 6 ರಂದು ‘ಸಂವಿಧಾನ ಉಳಿಸಿ ಕರ್ನಾಟಕ ಸಂಘಟನೆ’ಯು ಆಯೋಜಿಸಿದ್ದ ಸಭೆಯಲ್ಲಿ ಜಿಗ್ನೇಶ್ ಮಾತನಾಡಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಮತ ಹಾಕದಂತೆ ಕರೆ ನೀಡಿದ್ದರು. ನಂತರ ಸಭೆಯಲ್ಲಿ ಭಾಗವಹಿಸಿದ್ದವರಿಗೆ ಸಂಘಟಕರು ಹಣ ವಿತರಣೆ ಮಾಡಿದ್ದಾರೆ ಎಂದು ಆರೋಪಿಸಿ ಕ್ಷಿಪ್ರ ಪಡೆಯ ಅಧಿಕಾರಿ ದೂರು ನೀಡಿದ್ದು, ಗಂಗಾವತಿ ನಗರ ಠಾಣೆ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.