ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರಿನ ಏಳು ಮಂದಿ ಸಾವು

Last Updated 7 ಏಪ್ರಿಲ್ 2018, 19:30 IST
ಅಕ್ಷರ ಗಾತ್ರ

ವಿರುದುನಗರ್‌ (ತಮಿಳುನಾಡು): ಜಿಲ್ಲೆಯ ರಾಜಪಾಳ್ಯಂ ಬಳಿ ನಡೆದ ಅಪಘಾತದಲ್ಲಿ ಬೆಂಗಳೂರು ಮೂಲದ ಏಳು ಮಂದಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ಬೆಂಗಳೂರಿನ ಲಕ್ಷ್ಮಿ ನಾರಾಯಣ, ರತ್ನ, ಕಲಾವತಿ, ಶಂಕ್ರೆಗೌಡ, ಧರ, ಕಿರ್ತಿಕಾ, ಪ್ರವಿಣ್ ಎಂಬುವವರು ಮೃತಪಟ್ಟಿದ್ದಾರೆ. ಕಾರಿನಲ್ಲಿದ್ದ ಪ್ರಯಾಣಿಕರ ಪೈಕಿ ಆರು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಒಬ್ಬರನ್ನು ಆಸ್ಪತ್ರೆಗೆ ಕರೆದೊಯ್ಯುವಾಗ ದಾರಿಯಲ್ಲಿ ಅಸುನೀಗಿದ್ದಾರೆ. ಇಬ್ಬರು ಗಾಯಗೊಂಡಿದ್ದು ಚಿಕಿತ್ಸೆ ಪಡೆಯು ತ್ತಿದ್ದಾರೆ ಎಂದು ತಮಿಳುನಾಡು ಪೊಲೀಸರು ಹೇಳಿದ್ದಾರೆ.

ಬೆಂಗಳೂರು ಮೂಲದ ಕುಟುಂಬ ಕೇರಳ ಪ್ರವಾಸ ಮುಗಿಸಿಕೊಂಡು ತಿರುವುನಂತಪುರ ಮಾರ್ಗವಾಗಿ ತವರಿಗೆ ಮರಳುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ಅವರು ಹೇಳಿದ್ದಾರೆ.

ಲಾರಿ ಚಾಲಕನನ್ನು ಬಂಧಿಸಲಾಗಿದೆ. ಅಪಘಾತದಿಂದಾಗಿ ರಾಜಪಾಳ್ಯಂ– ತೆಂಕಸಿ ರಸ್ತೆಯಲ್ಲಿ ಒಂದು ಗಂಟೆಗೂ ಹೆಚ್ಚು ಸಂಚಾರ ದಟ್ಟಣೆ ಉಂಟಾಯಿತು ಎಂದು ಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT