‘ವರುಣಾ ಕ್ಷೇತ್ರದ ಕಾರ್ಯಕರ್ತರು ನನ್ನ ಸ್ಪರ್ಧೆ ಬಗ್ಗೆ ಒಲವು ತೋರುತ್ತಿದ್ದಾರೆ. ಅಭ್ಯರ್ಥಿಯಾಗಬೇಕೆಂದು ಒತ್ತಾಯಿಸುತ್ತಿದ್ದಾರೆ. ತಂದೆ ಜೊತೆ ಚರ್ಚಿಸಿ, ಕ್ಷೇತ್ರದಲ್ಲಿ ಯಾವ ರೀತಿ ತೊಡಗಿಸಿಕೊಳ್ಳಬೇಕೆಂದು ತೀರ್ಮಾನಿಸುತ್ತೇನೆ. ಸದ್ಯಕ್ಕೆ ಪಕ್ಷದ ಕಾರ್ಯಕರ್ತನಾಗಿ ಈ ಭಾಗದಲ್ಲಿ ಓಡಾಡುತ್ತೇನೆ. ಕಾರ್ಯಕರ್ತರು ಉತ್ಸುಕರಾಗಿದ್ದು, ಬಿಜೆಪಿಗೆ ಗೆಲುವು ಖಚಿತ’ ಎಂದು ಅವರು ಹೇಳಿದರು.