ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಪ್ರಾಣಿಗಳಿಗಿರುವ ನಿಯತ್ತು ಅಮಿತ್‌ ಶಾಗೆ ಇಲ್ಲ’

ಚಿತ್ರದುರ್ಗದಲ್ಲಿ ಜೆಡಿಎಸ್ ಮುಖಂಡ ಮಧು ಬಂಗಾರಪ್ಪ
Last Updated 9 ಏಪ್ರಿಲ್ 2018, 7:25 IST
ಅಕ್ಷರ ಗಾತ್ರ

ಚಿತ್ರದುರ್ಗ: ಪ್ರಾಣಿಗಳಿಗಿರುವ ನಿಯತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರಿಗೆ ಇಲ್ಲ ಎಂದು ಜೆಡಿಎಸ್ ರಾಜ್ಯ ಯುವ ಘಟಕದ ಅಧ್ಯಕ್ಷ ಮಧು ಬಂಗಾರಪ್ಪ ಹೇಳಿದರು.

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಎದುರಿಸಲು ಹಾವು, ಮುಂಗುಸಿ, ನಾಯಿ ಮತ್ತು ಬೆಕ್ಕುಗಳೆಲ್ಲ ಒಂದಾ
ಗುತ್ತಿವೆ ಎಂಬುದಾಗಿ ವಿರೋಧ ಪಕ್ಷಗಳ ವಿರುದ್ಧ ಮುಂಬೈಯಲ್ಲಿ ಮೊನ್ನೆ ಶಾ ಅವರು ನೀಡಿದ ಹೇಳಿಕೆಗೆ ಇಲ್ಲಿ ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಪ್ರತಿಕ್ರಿಯಿಸಿದರು.

‘ಶಾ ಅವರಿಗೆ ಕರ್ನಾಟಕದ ಮೇಲೆ ಅಭಿಮಾನ ಇದ್ದಿದ್ದರೆ ಮಹಾದಾಯಿ ನದಿ ನೀರು ಹಂಚಿಕೆ ಸಮಸ್ಯೆಯನ್ನು ಯಾವಾಗಲೋ ಬಗೆಹರಿಸುತ್ತಿದ್ದರು. ಅಲ್ಲದೆ, ರಾಜ್ಯದ ಅಭಿವೃದ್ಧಿಗಾಗಿ ಕೇಂದ್ರದಿಂದ ಸಾಕಷ್ಟು ಅನುದಾನದ ಉಡುಗೊರೆ ನೀಡುತ್ತಿದ್ದರು. ಇದ್ಯಾವುದನ್ನೂ ಮಾಡದೆ, ವಿರೋಧ ಪಕ್ಷಗಳ ವಿರುದ್ಧ ಮಾತನಾಡುವುದು ಎಷ್ಟು ಸರಿ’ ಎಂದು ಮಧು ಪ್ರಶ್ನಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT