ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎಲ್.ಚಂದ್ರಶೇಖರ ನಾಯಕ ಮಾತನಾಡಿ, ‘ವಿಧಾನಸಭೆ ಚುನಾವಣೆಯ ಹಿನ್ನೆಲೆ
ಯಲ್ಲಿ ಚುನಾವಣಾ ಆಯೋಗದ ನಿರ್ದೇಶನದಂತೆ ವ್ಯವಸ್ಥಿತ ಶಿಕ್ಷಣ ಹಾಗೂ ಮತದಾರರ ಸಹಭಾಗಿತ್ವ (ಸ್ವೀಪ್) ಕಾರ್ಯಕ್ರಮದ ಅಡಿ ಇದನ್ನು ಹಮ್ಮಿಕೊಳ್ಳಲಾಗುತ್ತಿದೆ. ಆ ಮೂಲಕ ಸಾರ್ವಜನಿಕರಲ್ಲಿ ಮತದಾನದ ಜಾಗೃತಿಯನ್ನೂ ಮೂಡಿಸಲಾಗುತ್ತದೆ. ಇವಿಎಂ ಮತ್ತು ವಿ.ವಿ ಪ್ಯಾಟ್ಗಳನ್ನು ಈಗಾಗಲೇ ಹಲವು ಬಾರಿ ತಪಾಸಣೆಗೆ ಒಳಪಡಿಸಲಾಗಿದೆ’ ಎಂದರು.