ಇದಕ್ಕೂ ಮುನ್ನ ಅಧಿಕಾರಿಗಳ ಸಭೆ ನಡೆಸಿದ ಜಿಲ್ಲಾಧಿಕಾರಿ, ‘ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಮತದಾರರ ಪಟ್ಟಿಯಲ್ಲಿ ಹೆಸರಿದ್ದು, ಸಂಬಂಧಿಸಿದ ಮತಗಟ್ಟೆ ವ್ಯಾಪ್ತಿಯಲ್ಲಿ ವಾಸ ಇರದವರನ್ನು ಪತ್ತೆ ಹಚ್ಚಲು ಮತಗಟ್ಟೆ ಮಟ್ಟದ ಅಧಿಕಾರಿಯೊಂದಿಗೆ ಆಹಾರ ಇಲಾಖೆಯ ಒಬ್ಬ ಸಿಬ್ಬಂದಿ, ಪಾಲಿಕೆಯ ವಾಟರ್ ಮನ್ ಗಳನ್ನು ನಿಯೋಜಿಸಲಾಗಿದೆ. ನಿಯೋಜಿತರು 3 ದಿನಗಳ ಒಳಗೆ ಅನರ್ಹರನ್ನು ಪತ್ತೆ ಹಚ್ಚಿ ಪಟ್ಟಿಯಿಂದ ಕೈ ಬಿಡಬೇಕು ಎಂದು ತಾಕೀತು’ ಮಾಡಿದರು.