ಗೋಲ್ಡ್ ಕೋಸ್ಟ್: ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನ ಗೆಲ್ಲುವ ಮೂಲಕ ಭಾರತ ಬ್ಯಾಡ್ಮಿಂಟನ್ ತಂಡದ ಕನಸು ಸೋಮವಾರ ಕೈಗೂಡಿತು.
ಸೋಮವಾರ ನಡೆದ ಮಿಶ್ರ ತಂಡ ವಿಭಾಗದ ಫೈನಲ್ನಲ್ಲಿ ಚಿನ್ನ ಗೆಲ್ಲುವ ಹಾದಿಯಲ್ಲಿ ಹೆಜ್ಜೆ ಹಾಕಿದ ಭಾರತ ತಂಡ ಮಲೇಷ್ಯಾ ವಿರುದ್ಧ ಗೆಲುವು ಸಾಧಿಸಿ ತನ್ನ ಕನಸನ್ನು ನನಸಾಗಿಸಿಕೊಂಡಿತು.
ಗುರಿಯೊಂದಿಗೆ ಕಣಕ್ಕಿಳಿದಿದ್ದ ಭಾರತಕ್ಕೆ ಕರ್ನಾಟಕದ ಅಶ್ವಿನಿ ಪೊನ್ನಪ್ಪ ಮತ್ತು ಸಾತ್ವಿಕ್ ಸಾಯಿರಾಜ್ ರಣಕಿರೆಡ್ಡಿ ಗೆಲುವು ತಂದುಕೊಟ್ಟರು.
ಪೆಂಗ್ ಸೂನ್ ಚಾನ್ ಮತ್ತು ಲಿಯು ಯಾಂಗ್ ಗೋಹ್ ವಿರುದ್ಧ ಮಿಶ್ರ ಡಬಲ್ಸ್ನಲ್ಲಿ ಸಾತ್ವಿಕ್ ಸಾಯಿರಾಜ್ ರಣಕಿರೆಡ್ಡಿ ಮತ್ತು ಅಶ್ವಿನಿ ಪೊನ್ನಪ್ಪ ಜೋಡಿ 21-14 15-21 21-15ರಲ್ಲಿ ಪಂದ್ಯ ಗೆದ್ದುಕೊಂಡರು.
ಕ್ಯಾರರಾ ಕ್ರೀಡಾ ಸಂಕೀರ್ಣದಲ್ಲಿ ಭಾನುವಾರ ನಡೆದ ಮಿಶ್ರ ತಂಡ ವಿಭಾಗದ ಸೆಮಿಫೈನಲ್ ಹೋರಾಟದಲ್ಲಿ ಭಾರತ 3–1ರಿಂದ ಸಿಂಗಪುರ ಸವಾಲು ಮೀರಿ ಫೈನಲ್ಗೆ ಲಗ್ಗೆ ಇಟ್ಟ ಸಾಧನೆ ಮಾಡಿತ್ತು.