ನವದೆಹಲಿ: ‘ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿಯಾಗಿ ನ್ಯಾಯಾಧೀಶರೊಬ್ಬರಿಗೆ ನೀಡಿದ ಬಡ್ತಿ ಶಿಫಾರಸನ್ನು ಅವರ ವಿರುದ್ಧದ ಲೈಂಗಿಕ ಕಿರುಕುಳದ ಆರೋಪವನ್ನು ಮಹಿಳಾ ನ್ಯಾಯಮೂರ್ತಿಯೊಬ್ಬರು ನ್ಯಾಯಬದ್ಧ ರೀತಿಯಲ್ಲಿ ಇತ್ಯರ್ಥಪಡಿಸುವವರೆಗೆ ತಡೆ ಹಿಡಿಯಲು ಸಾಧ್ಯವೇ’ ಎಂದು ಕೇಂದ್ರ ಕಾನೂನು ಸಚಿವ ರವಿಶಂಕರ್ ಪ್ರಸಾದ್ ಅವರು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಅವರನ್ನು ಕೇಳಿದ್ದಾರೆ.