ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ತಾಲ್ಲೂಕಿನಲ್ಲಿ ಶಾಂತಿಯುತ ಹಾಗೂ ಅಕ್ರಮಕ್ಕೆ ಅವಕಾಶ ಇಲ್ಲದಂತೆ ಚುನಾವಣೆ ನಡೆಸಲು ಎಲ್ಲ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ರಾಜಕೀಯ ಪಕ್ಷಗಳು ಮತದಾರರಿಗೆ ಆಮಿಷವೊಡ್ಡಲು ಹಣ, ಮದ್ಯ, ಉಡುಗೊರೆ ನೀಡುವುದು ಸಾಮಾನ್ಯ. ಆದರೆ, ಇದನ್ನು ತಡೆಗಟ್ಟಲು ಕ್ರಮ ಕೈಗೊಳ್ಳಲಾಗಿದೆ’ ಎಂದರು.