ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿದ್ದರಾಮಯ್ಯ ಹೇಳಿದ್ದೆಲ್ಲ ಉಲ್ಟಾ ಆಗಿದೆ: ಈಶ್ವರಪ್ಪ

Last Updated 9 ಏಪ್ರಿಲ್ 2018, 19:33 IST
ಅಕ್ಷರ ಗಾತ್ರ

ಶಿವಮೊಗ್ಗ: ಮುಖ್ಯಮಂತ್ರಿ ಸಿದ್ದರಾಮಯ್ಯ ಏನನ್ನು ಆಗುವುದಿಲ್ಲ ಎನ್ನುತ್ತಾರೋ, ಅದೆಲ್ಲವೂ ಆಗಿದೆ. ಹಾಗಾಗಿ, ಬಿಜೆಪಿ ಈ ಬಾರಿ ಅಧಿಕಾರಕ್ಕೆ ಬರುವುದಿಲ್ಲ ಎಂಬ ಅವರ ಹೇಳಿಕೆಯನ್ನು ‘ಬರುತ್ತದೆ’ ಎಂದೇ ಅರ್ಥೈಸಿಕೊಳ್ಳಬೇಕು ಎಂದು ಶಿವಮೊಗ್ಗ ನಗರ ಕ್ಷೇತ್ರದ ಅಭ್ಯರ್ಥಿ ಕೆ.ಎಸ್. ಈಶ್ವರಪ್ಪ ಪ್ರತಿಪಾದಿಸಿದರು.

2014ರ ಲೋಕಸಭಾ ಚುನಾವಣೆಯಲ್ಲಿ ನರೇಂದ್ರ ಮೋದಿ ಅವರು ಪ್ರಧಾನಿ ಆಗುವುದಿಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದರು. ನಂತರ ಏನಾಯಿತು?. ಈಗ ಯಡಿಯೂರಪ್ಪ ವಿರುದ್ಧ ಅಂಥ ಮಾತು ಹೇಳುತ್ತಿದ್ದಾರೆ. ಮತ್ತೆ ಇತಿಹಾಸ ಮರುಕಳಿಸಲಿದೆ ಎಂದರು.

ನಟ ಪ್ರಕಾಶ್ ರೈ ರಾಮಚಂದ್ರಾಪುರ ಮಠಕ್ಕೆ ಬಂದರೆ ಗೋಮೂತ್ರ, ಗೋವಿನ ಸಗಣಿಯ ಮಹತ್ವ ಅರ್ಥ ಮಾಡಿಸಲಾಗುವುದು. ಅದು ಬಿಟ್ಟು ಭಂಡತನದ ಹೇಳಿಕೆ ನೀಡುತ್ತಾ ಹೋದರೆ ಅದಕ್ಕೆಲ್ಲ ಉತ್ತರಿಸುವ ಅಗತ್ಯವಿಲ್ಲ ಎಂದು ತಿರುಗೇಟು ನೀಡಿದರು.

ಬಿಜೆಪಿ 72 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರು ಘೋಷಣೆ ಮಾಡಿದೆ. ಟಿಕೆಟ್ ಸಿಗದವರು ದುಡುಕಿನ ನಿರ್ಧಾರ ತೆಗೆದುಕೊಳ್ಳಬಾರದು. ಅತೃಪ್ತರ ಜತೆ ಚರ್ಚಿಸಿ ಸಮಸ್ಯೆ ಬಗೆಹರಿಸಲಾಗುವುದು ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT