ಕಾಮಗಾರಿ ಪ್ರಶ್ನಿಸಿದ್ದಕ್ಕೆ ಹಲ್ಲೆ: ‘ನನ್ನ ಸಹೋದರ ಸುರೇಶ್, ಸ್ಟೀಲ್ ಅಂಗಡಿ ಇಟ್ಟುಕೊಂಡಿದ್ದಾರೆ. ಅದರ ಮುಂದೆ ಹಲವು ದಿನಗಳಿಂದ ಕಾಮಗಾರಿ ನಡೆಯುತ್ತಿದೆ. ತ್ವರಿತವಾಗಿ ಕಾಮಗಾರಿ ಮುಗಿಸುವಂತೆ ಕಾರ್ಪೊರೇಟರ್ ಅವರ ಪತಿ ಅಭಿಲಾಷ್ ರೆಡ್ಡಿ ಅವರನ್ನು ಕೋರಿದ್ದೆ. ಅದೇ ಕಾರಣಕ್ಕೆ ಅವರ ಬೆಂಬಲಿಗರು, ಅಂಗಡಿ ಬಳಿ ಬಂದು ಗಲಾಟೆ ಮಾಡಿ ಹಲ್ಲೆ ಮಾಡಿದ್ದಾರೆ’ ಎಂದು ವಿಜಯ್ ಸುದ್ದಿಗಾರರಿಗೆ ತಿಳಿಸಿದರು.