ಈ ವೇಳೆ ಮಾತನಾಡಿದ ಸಮಿತಿಯ ರಾಜ್ಯ ಸಂಘಟನಾ ಸಂಚಾಲಕ ಸು.ಧಾ ವೆಂಕಟೇಶ್ ಮಾತನಾಡಿ, ‘ದೇಶದ ದಲಿತರಿಗೆ ಸಂವಿಧಾನ ಒದಗಿಸಿರುವ ಸಾಮಾಜಿಕ ಸಮಾನತೆ ಅವಕಾಶವನ್ನು ನಿರಾಕರಿಸಲು ಷಡ್ಯಂತ್ರ ಮಾಡಲಾಗುತ್ತಿದೆ. ಮೊದಲು ಬಡ್ತಿ ಮೀಸಲಾತಿ ಕಸಿದುಕೊಳ್ಳಲಾಯಿತು. ಈಗ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪು ದಲಿತರ ಹಿತಕ್ಕೆ ವಿರುದ್ಧವಾಗಿದೆ. ದಲಿತ ದೌರ್ಜನ್ಯ ತಡೆ ಕಾಯ್ದೆ ದುರ್ಬಲಗೊಳ್ಳುವಂತಹ ತೀರ್ಪು ಇದಾಗಿದೆ’ ಎಂದು ಆರೋಪಿಸಿದರು.