ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕದನ ವಿರಾಮ ಉಲ್ಲಂಘಿಸಿದ ಪಾಕ್ ಸೇನೆ: ಇಬ್ಬರು ಭಾರತೀಯ ಯೋಧರು ಹುತಾತ್ಮ

Last Updated 10 ಏಪ್ರಿಲ್ 2018, 6:52 IST
ಅಕ್ಷರ ಗಾತ್ರ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಗಡಿಯಲ್ಲಿ ಪಾಕಿಸ್ತಾನ ಸೈನಿಕರು ಕದನ ವಿರಾಮ ಉಲ್ಲಂಘಿಸಿ ಭಾರತೀಯ ಚೆಕ್‌ ಪೋಸ್ಟ್ ಗಳನ್ನು ಗುರಿಯಾಗಿಸಿಕೊಂಡು ನಡೆಸಿದ ಶೆಲ್ ದಾಳಿಯಲ್ಲಿ ಇಬ್ಬರು ಭಾರತೀಯ ಯೋಧರು ಹುತಾತ್ಮರಾಗಿದ್ದಾರೆ.

ಮಂಗಳವಾರ ಬೆಳಗ್ಗೆ ಇಲ್ಲಿನ ರಜೌರಿ ವಲಯದಲ್ಲಿರುವ ಚೆಕ್‌ ಪೋಸ್ಟ್‌ಗಳ ಮೇಲೆ ದಾಳಿ ಮಾಡಲಾಗಿದ್ದು ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ ಎಂದು ರಕ್ಷಣಾ ಇಲಾಖೆ ಖಚಿತಪಡಿಸಿದೆ.

ಮೃತ ಯೋಧರನ್ನು ವಿನೋದ್ ಸಿಂಗ್ ಮತ್ತು ಜಾಕಿ ಶರ್ಮಾ ಎಂದು ಗುರುತಿಸಲಾಗಿದೆ. ಈ ಯೋಧರು ರೈಫಲ್‌ ಮನ್‌ಗಳಾಗಿ ಚೆಕ್‌ ಪೋಸ್ಟ್‌ನಲ್ಲಿ ಕಾವಲು ಕಾಯುತ್ತಿದ್ದರು. ಈ ಘಟನೆಯಲ್ಲಿ ಮತ್ತಿಬ್ಬರು ಭಾರತೀಯ ಯೊಧರಿಗೆ ಗಂಭೀರ ಗಾಯಗಳಾಗಿವೆ ರಕ್ಷಣಾ ವಕ್ತಾರರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT