<p><strong>ನವದೆಹಲಿ</strong>: ಇಂಡಿಗೊ ವಿಮಾನದ ಸಿಬ್ಬಂದಿ, ಪ್ರಯಾಣಿಕರೊಬ್ಬರನ್ನು ಲಖನೌ ನಿಲ್ದಾಣದಲ್ಲಿ ಸೋಮವಾರ ಬಲವಂತವಾಗಿ ವಿಮಾನದಿಂದ ಇಳಿಸಿದ ಪ್ರಕರಣದ ತನಿಖೆಗೆ ನಾಗರಿಕ ವಿಮಾನಯಾನ ಸಚಿವ ಸುರೇಶ್ ಪ್ರಭು ಅವರು ಮಂಗಳವಾರ ಆದೇಶಿಸಿದ್ದಾರೆ.</p>.<p>‘ಲಖನೌದಿಂದ ಬೆಂಗಳೂರಿಗೆ ಹೊರಡಬೇಕಿದ್ದ ಇಂಡಿಗೊ ವಿಮಾನದಲ್ಲಿ ಸೊಳ್ಳೆ ಇರುವ ಕುರಿತು ಆಕ್ಷೇಪ ವ್ಯಕ್ತಪಡಿಸಿದ್ದಕ್ಕೆ ನನ್ನ ಮೇಲೆ ಹಲ್ಲೆ ನಡೆಸಿ, ವಿಮಾನದಿಂದ ಬಲವಂತವಾಗಿ ಕೆಳಗಿಳಿಸಲಾಗಿದೆ’ ಎಂದು ಬೆಂಗಳೂರಿನ ವೈದ್ಯ ಸೌರಭ್ ರೈ ಆರೋಪಿಸಿದ್ದಾರೆ.</p>.<p>‘ಸೌರಭ್ ಅವರ ಆಕ್ಷೇಪವನ್ನು ನಾವು ಪರಿಗಣಿಸುವ ಮುನ್ನವೇ ಅವರು ಬೆದರಿಕೆಯ ಮಾತುಗಳನ್ನಾಡಿ ‘ಹೈಜಾಕ್’ ಪದ ಬಳಸಿದರು. ವಿಮಾನವನ್ನು ಹಾನಿಗೊಳಿಸುವಂತೆ ಸಹಪ್ರಯಾಣಿಕರನ್ನು ಪ್ರೇರೇಪಿಸಲು ಪ್ರಯತ್ನಪಟ್ಟರು’ ಎಂದು ವಿಮಾನ ಸಂಸ್ಥೆ ಸರಣಿ ಟ್ವೀಟ್ ಮಾಡಿದೆ. ಆದರೆ ಅಧಿಕೃತ ಪ್ರಕಟಣೆ ಬಿಡುಗಡೆ ಮಾಡಿಲ್ಲ.</p>.<p>ಇದಕ್ಕೆ ಪ್ರತಿಯಾಗಿ ಸೌರಭ್ ಅವರು, ‘ನನ್ನ ಮೇಲೆ ಇಷ್ಟೆಲ್ಲ ಆರೋಪಗಳಿದ್ದರೆ ಇಂಡಿಗೊ ಸಿಬ್ಬಂದಿ ಏಕೆ ನನ್ನನ್ನು ಮತ್ತು ನನ್ನ ಚೀಲಗಳನ್ನು ತಪಾಸಣೆ ನಡೆಸಿಲ್ಲ. ಮತ್ತೊಂದು ವಿಮಾನದಲ್ಲಿ ಪ್ರಯಾಣ ಮಾಡಲು ಏಕೆ ಅವಕಾಶ ನೀಡಿದರು’ ಎಂದು ಪ್ರಶ್ನಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಇಂಡಿಗೊ ವಿಮಾನದ ಸಿಬ್ಬಂದಿ, ಪ್ರಯಾಣಿಕರೊಬ್ಬರನ್ನು ಲಖನೌ ನಿಲ್ದಾಣದಲ್ಲಿ ಸೋಮವಾರ ಬಲವಂತವಾಗಿ ವಿಮಾನದಿಂದ ಇಳಿಸಿದ ಪ್ರಕರಣದ ತನಿಖೆಗೆ ನಾಗರಿಕ ವಿಮಾನಯಾನ ಸಚಿವ ಸುರೇಶ್ ಪ್ರಭು ಅವರು ಮಂಗಳವಾರ ಆದೇಶಿಸಿದ್ದಾರೆ.</p>.<p>‘ಲಖನೌದಿಂದ ಬೆಂಗಳೂರಿಗೆ ಹೊರಡಬೇಕಿದ್ದ ಇಂಡಿಗೊ ವಿಮಾನದಲ್ಲಿ ಸೊಳ್ಳೆ ಇರುವ ಕುರಿತು ಆಕ್ಷೇಪ ವ್ಯಕ್ತಪಡಿಸಿದ್ದಕ್ಕೆ ನನ್ನ ಮೇಲೆ ಹಲ್ಲೆ ನಡೆಸಿ, ವಿಮಾನದಿಂದ ಬಲವಂತವಾಗಿ ಕೆಳಗಿಳಿಸಲಾಗಿದೆ’ ಎಂದು ಬೆಂಗಳೂರಿನ ವೈದ್ಯ ಸೌರಭ್ ರೈ ಆರೋಪಿಸಿದ್ದಾರೆ.</p>.<p>‘ಸೌರಭ್ ಅವರ ಆಕ್ಷೇಪವನ್ನು ನಾವು ಪರಿಗಣಿಸುವ ಮುನ್ನವೇ ಅವರು ಬೆದರಿಕೆಯ ಮಾತುಗಳನ್ನಾಡಿ ‘ಹೈಜಾಕ್’ ಪದ ಬಳಸಿದರು. ವಿಮಾನವನ್ನು ಹಾನಿಗೊಳಿಸುವಂತೆ ಸಹಪ್ರಯಾಣಿಕರನ್ನು ಪ್ರೇರೇಪಿಸಲು ಪ್ರಯತ್ನಪಟ್ಟರು’ ಎಂದು ವಿಮಾನ ಸಂಸ್ಥೆ ಸರಣಿ ಟ್ವೀಟ್ ಮಾಡಿದೆ. ಆದರೆ ಅಧಿಕೃತ ಪ್ರಕಟಣೆ ಬಿಡುಗಡೆ ಮಾಡಿಲ್ಲ.</p>.<p>ಇದಕ್ಕೆ ಪ್ರತಿಯಾಗಿ ಸೌರಭ್ ಅವರು, ‘ನನ್ನ ಮೇಲೆ ಇಷ್ಟೆಲ್ಲ ಆರೋಪಗಳಿದ್ದರೆ ಇಂಡಿಗೊ ಸಿಬ್ಬಂದಿ ಏಕೆ ನನ್ನನ್ನು ಮತ್ತು ನನ್ನ ಚೀಲಗಳನ್ನು ತಪಾಸಣೆ ನಡೆಸಿಲ್ಲ. ಮತ್ತೊಂದು ವಿಮಾನದಲ್ಲಿ ಪ್ರಯಾಣ ಮಾಡಲು ಏಕೆ ಅವಕಾಶ ನೀಡಿದರು’ ಎಂದು ಪ್ರಶ್ನಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>