ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಲ್ಘಾಮ್ ವಲಯದಲ್ಲಿ ಭದ್ರತಾಪಡೆ ಹಾಗೂ ಉಗ್ರರ ನಡುವೆ ನಡೆದ ಗುಂಡಿನ ದಾಳಿಯಲ್ಲಿ ಒಬ್ಬ ಯೋಧ ಹುತಾತ್ಮರಾಗಿದ್ದಾರೆ. ಇಬ್ಬರು ಗಾಯಗೊಂಡಿದ್ದಾರೆ.
ಮಂಗಳವಾರ ಮಧ್ಯರಾತ್ರಿ ಕುಲ್ಘಾಮ್ ಜಿಲ್ಲೆಯ ಕುದ್ವಾನಿ ಎಂಬಲ್ಲಿ ಭದ್ರತಾಪಡೆ ಮತ್ತು ಉಗ್ರರ ನಡುವೆ ಗುಂಡಿನ ಚಕಮಕಿ ಆರಂಭವಾಯಿತು. ಈ ವೇಳೆ ಇಬ್ಬರು ಅಥವಾ ಮೂವರು ಉಗ್ರರು ಸೆರೆಸಿಕ್ಕಿದ್ದಾರೆ ಎಂದು ಆಡಳಿತಾಧಿಕಾರಿಗಳು ತಿಳಿಸಿದ್ದಾರೆ.
ಎನ್ಕೌಂಟರ್ ಸ್ಥಳಕ್ಕೆ ತೆರಳಿದ ಹೆಚ್ಚಿನ ಆರು ಸಿಆರ್ಪಿಎಫ್ ಪಡೆ ಕಾರ್ಯಾಚರಣೆ ಮುಂದುವರೆಸಿದೆ.
ಈ ಘಟನಾ ಸಂಬಂಧ ಕುಲ್ಘಾಮ್ ಮತ್ತು ಅನಂತನಾಗ್ ಜಿಲ್ಲೆಯಲ್ಲಿ ಅಂತರ್ಜಾಲ ಸೇವೆಯನ್ನು ಕಡಿತಗೊಳಿಸಲಾಗಿದೆ. ಇನ್ನು ಮುನ್ನೆಚ್ಚರಿಕೆ ಕ್ರಮವಾಗಿ ಶ್ರೀನಗರ–ಬನಿಹಾಳ್ ನಡುವಿನ ರೈಲ್ವೆ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ. ಶ್ರೀನಗರ–ಬರಮುಲ್ಲಾ ನಡುವಿನ ರೈಲ್ವೆ ಸಂಚಾರದಲ್ಲಿ ಯಾವುದೇ ವ್ಯತ್ಯಯವಿಲ್ಲ.