ಭಾನು ಮತ್ತು ಭೂಮಿಯನ್ನು ರೂಪಕವಾಗಿ ಬಳಸಿಕೊಂಡು ಅಪ್ಪಟ ನೆಲದ ಸೊಗಡಿನ ಪ್ರೇಮ ಕಥಾನಕವೊಂದನ್ನು ಹೇಳಲು ಹೊರಟಿದ್ದಾರೆ ನಿರ್ದೇಶಕರು. ಇಡೀ ಕಥೆ ಮೈಸೂರಿನ ಭೂಮಿಕೆಯಲ್ಲಿ ಜರುಗುತ್ತದೆ. ಬೆಂಗಳೂರು, ಮೈಸೂರು, ಶಿವಮೊಗ್ಗ, ಕೊಡಗು, ಸಕಲೇಶಪುರ ಮತ್ತು ಕಾರವಾರದ ಸುಂದರ ತಾಣಗಳಲ್ಲಿ ಚಿತ್ರೀಕರಣ ನಡೆಸಲು ಚಿತ್ರ ತಂಡ ಯೋಜನೆ ಹಾಕಿಕೊಂಡಿದೆ. ಈ ಚಿತ್ರದ ನಾಲ್ಕು ಹಾಡುಗಳಿಗೆ ಲೋಕಿ ಸಂಗೀತ ನೀಡಲಿದ್ದಾರೆ.