<p><strong>ಬೆಂಗಳೂರು: </strong>ರಾಜ್ಯದ ವಿವಿದೆಡೆ ಬುಧವಾರ ಬಿರುಗಾಳಿ, ಗುಡುಗು ಸಹಿತ ಮಳೆಯಾಗಿದೆ. ಹೊಸನಗರ ತಾಲ್ಲೂಕಿನ ರಿಪ್ಪನ್ಪೇಟೆ ಸುತ್ತಮುತ್ತ ಕಳೆದ ಎರಡು ದಿನಗಳಿಂದ ಬೀಸಿದ ಗಾಳಿ ಹಾಗೂ ಮಳೆಯಿಂದ 52 ವಿದ್ಯುತ್ ಕಂಬಗಳು ನೆಲಕ್ಕುರುಳಿವೆ.</p>.<p>ಉಡುಪಿ ಜಿಲ್ಲೆ ಹೆಬ್ರಿ ಪರಿಸರದಲ್ಲಿ ಬುಧವಾರ ಸಂಜೆ ಸಿಡಿಲು ಸಹಿತ ಗಾಳಿ ಮಳೆ ಸುರಿದಿದೆ. ಇಲ್ಲಿನ ತಾಲ್ಲೂಕು ಕಚೇರಿ ಎದುರು ಸರ್ಕಾರಿ ಮಾದರಿ ಶಾಲೆ ಮುಂಭಾಗದ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ವಾಹನಗಳ ಮೇಲೆ ಮರವೊಂದು ಉರುಳಿ ಬಿದ್ದ ಪರಿಣಾಮ 4 ವಾಹನಗಳು ಜಖಂಗೊಂಡಿವೆ. ಯಾವುದೇ ಪ್ರಾಣಾಹಾನಿ ಸಂಭವಿಸಿಲ್ಲ.</p>.<p>ಶೃಂಗೇರಿ ಭಾಗದಲ್ಲೂ ಮಳೆ ಆಗಿದೆ.</p>.<p><strong>ಸಾಧಾರಣ ಮಳೆ: </strong>ಕೊಡಗು ಜಿಲ್ಲೆಯ ವಿವಿಧೆಡೆ ಬುಧವಾರ ಸಾಧಾರಣ ಮಳೆ ಸುರಿಯಿತು. ಮಂಗಳವಾರ ಸಹ ಮಳೆಯಾಗಿತ್ತು. ಮಧ್ಯಾಹ್ನ ಮಡಿಕೇರಿಯಲ್ಲಿ ಎರಡು ತಾಸು ಗುಡುಗು ಸಹಿತ ಮಳೆ ಸುರಿಯಿತು. ಭಾಗಮಂಡಲ, ತಲಕಾವೇರಿ, ನಾಪೋಕ್ಲು ವ್ಯಾಪ್ತಿಯಲ್ಲೂ ತುಂತುರು ಮಳೆಯಾಗಿದೆ.</p>.<p><strong>ಉತ್ತಮ ಮಳೆ: </strong>ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕು ಹಾಗೂ ರಿಪ್ಪನ್ಪೇಟೆಯಲ್ಲಿ ಉತ್ತಮ ಮಳೆಯಾಗಿದೆ.</p>.<p>ಹಾವೇರಿಯಲ್ಲಿ ಬುಧವಾರ ಸಂಜೆ ಸಿಡಿಲು ಸಹಿತ ಮಳೆಯಾಗಿದೆ. ನಗರ ಹೊರವಲಯದ ರಾಣೆಬೆನ್ನೂರು ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿಯ ಮೇಲೆ ಹುಣಸೆ ಮರವೊಂದು ಬಿದ್ದಿದ್ದರಿಂದ ಕೆಲಕಾಲ ವಾಹನ ಸಂಚಾರ ವ್ಯತ್ಯಯವಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ರಾಜ್ಯದ ವಿವಿದೆಡೆ ಬುಧವಾರ ಬಿರುಗಾಳಿ, ಗುಡುಗು ಸಹಿತ ಮಳೆಯಾಗಿದೆ. ಹೊಸನಗರ ತಾಲ್ಲೂಕಿನ ರಿಪ್ಪನ್ಪೇಟೆ ಸುತ್ತಮುತ್ತ ಕಳೆದ ಎರಡು ದಿನಗಳಿಂದ ಬೀಸಿದ ಗಾಳಿ ಹಾಗೂ ಮಳೆಯಿಂದ 52 ವಿದ್ಯುತ್ ಕಂಬಗಳು ನೆಲಕ್ಕುರುಳಿವೆ.</p>.<p>ಉಡುಪಿ ಜಿಲ್ಲೆ ಹೆಬ್ರಿ ಪರಿಸರದಲ್ಲಿ ಬುಧವಾರ ಸಂಜೆ ಸಿಡಿಲು ಸಹಿತ ಗಾಳಿ ಮಳೆ ಸುರಿದಿದೆ. ಇಲ್ಲಿನ ತಾಲ್ಲೂಕು ಕಚೇರಿ ಎದುರು ಸರ್ಕಾರಿ ಮಾದರಿ ಶಾಲೆ ಮುಂಭಾಗದ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ವಾಹನಗಳ ಮೇಲೆ ಮರವೊಂದು ಉರುಳಿ ಬಿದ್ದ ಪರಿಣಾಮ 4 ವಾಹನಗಳು ಜಖಂಗೊಂಡಿವೆ. ಯಾವುದೇ ಪ್ರಾಣಾಹಾನಿ ಸಂಭವಿಸಿಲ್ಲ.</p>.<p>ಶೃಂಗೇರಿ ಭಾಗದಲ್ಲೂ ಮಳೆ ಆಗಿದೆ.</p>.<p><strong>ಸಾಧಾರಣ ಮಳೆ: </strong>ಕೊಡಗು ಜಿಲ್ಲೆಯ ವಿವಿಧೆಡೆ ಬುಧವಾರ ಸಾಧಾರಣ ಮಳೆ ಸುರಿಯಿತು. ಮಂಗಳವಾರ ಸಹ ಮಳೆಯಾಗಿತ್ತು. ಮಧ್ಯಾಹ್ನ ಮಡಿಕೇರಿಯಲ್ಲಿ ಎರಡು ತಾಸು ಗುಡುಗು ಸಹಿತ ಮಳೆ ಸುರಿಯಿತು. ಭಾಗಮಂಡಲ, ತಲಕಾವೇರಿ, ನಾಪೋಕ್ಲು ವ್ಯಾಪ್ತಿಯಲ್ಲೂ ತುಂತುರು ಮಳೆಯಾಗಿದೆ.</p>.<p><strong>ಉತ್ತಮ ಮಳೆ: </strong>ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕು ಹಾಗೂ ರಿಪ್ಪನ್ಪೇಟೆಯಲ್ಲಿ ಉತ್ತಮ ಮಳೆಯಾಗಿದೆ.</p>.<p>ಹಾವೇರಿಯಲ್ಲಿ ಬುಧವಾರ ಸಂಜೆ ಸಿಡಿಲು ಸಹಿತ ಮಳೆಯಾಗಿದೆ. ನಗರ ಹೊರವಲಯದ ರಾಣೆಬೆನ್ನೂರು ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿಯ ಮೇಲೆ ಹುಣಸೆ ಮರವೊಂದು ಬಿದ್ದಿದ್ದರಿಂದ ಕೆಲಕಾಲ ವಾಹನ ಸಂಚಾರ ವ್ಯತ್ಯಯವಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>