ಈ ಕುರಿತು ಪ್ರಕಟಣೆ ನೀಡಿರುವ ಅವರು, ‘ನಾನು 10 ವರ್ಷಗಳಿಂದ ಪಕ್ಷದಲ್ಲಿ ಕೆಲಸ ಮಾಡುತ್ತಿದ್ದೇನೆ. ಕಾಂಗ್ರೆಸ್ ತಾಲ್ಲೂಕು ಯುವ ಘಟಕದ ಅಧ್ಯಕ್ಷನಾಗಿ, ಎನ್ಎಸ್ಯುವೈ ಅಧ್ಯಕ್ಷನಾಗಿ, ಜಿಲ್ಲಾ ಉಪಾಧ್ಯಕ್ಷನಾಗಿ ಕೆಲಸ ಮಾಡಿದ ಅನುಭವ ಇದೆ. ಜತೆಗೆ ಸ್ಥಳೀಯ ಶಾಸಕ ಪ್ರಭು ಚವಾಣ್ ಅವರ ವಿರುದ್ಧ ನಿರಂತರ ಹೋರಾಟ ಮಾಡಿ ಪಕ್ಷದ ಕಾರ್ಯಕರ್ತರ ಜತೆಗಿದ್ದು ಕೆಲಸ ಮಾಡಿದ್ದೇನೆ. ತಾಲ್ಲೂಕಿನ ಎಲ್ಲ ಊರಿನ ಜನರ ಜತೆ ಸಂಪರ್ಕ ಇದೆ. ಹೀಗಿರುವಾಗ ಏಕಾ ಏಕಿ ಪಕ್ಷ ಸೇರಿದವರಿಗೆ ಟಿಕೆಟ್ ಕೊಟ್ಟರೆ ಸುಮ್ಮನಿರುವುದಿಲ್ಲ’ ಎಂದು ಎಚ್ಚರಿಕೆ ನೀಡಿದ್ದಾರೆ.