ಜಿಲ್ಲಾ ಕ್ರಿಕೆಟ್ ಸಂಸ್ಥೆಯ ಅಧ್ಯಕ್ಷ ಡಾ. ಕೃಷ್ಣ ಪ್ರಸಾದ್ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಚಿಕಿತ್ಸೆ ಸ್ಪಂದಿಸದೆ ರೋಗಿ ಮೃತಪಟ್ಟಾಗ, ಪ್ರಾಮಾಣಿಕವಾಗಿ ಚಿಕಿತ್ಸೆ ನೀಡಿದ ವೈದ್ಯರನ್ನು ಸಾವಿಗೆ ಹೊಣೆಗಾರರನ್ನಾಗಿ ಮಾಡಿ, ಹಲ್ಲೆ ನಡೆಸುವ ಘಟನೆ ಹೆಚ್ಚುತ್ತಿವೆ. ಇಂತಹ ಘಟನೆಗಳು ವೈದ್ಯರ ಮನೋಸ್ಥೈರ್ಯವನ್ನು ಕುಗ್ಗಿಸುತ್ತಿವೆ.ಇಂತಹ ಭಯದ ವಾತಾವರಣದಲ್ಲಿ ಕೆಲಸ ಮಾಡುವ ವೈದ್ಯರಿಗೆ ಕ್ರೀಡಾಕೂಟವೂ ನಿರಾಳತೆ ಒದಗಿಸಬಲ್ಲದು ಎಂದರು.