ಈ ಬಗ್ಗೆ ‘ಪ್ರಜಾವಾಣಿ’ ಜತೆ ಮಾತನಾಡಿದ ಶಾಸಕ ತಿಪ್ಪೇಸ್ವಾಮಿ, ‘ಈವರೆಗೂ ಕಾಂಗ್ರೆಸ್ನ ಯಾವುದೇ ಮುಖಂಡರು ನನ್ನನ್ನು ಸಂಪರ್ಕಿಸಿಲ್ಲ. ಆದರೆ ಕಾಂಗ್ರೆಸ್ನ ಹಲವು ಮುಖಂಡರು ‘ಸೇರ್ಪಡೆ ಮಾಡಿಸೋಣ’ ಎಂದು ಮಾತನಾಡುತ್ತಿದ್ದಾರೆ ಎಂಬುದು ಗಮನಕ್ಕೆ ಬಂದಿದೆ. ಇದು ನನ್ನ ಅವಧಿಯಲ್ಲಿ ಕ್ಷೇತ್ರದಲ್ಲಿ ಹೊಂದಿರುವ ಜನಪ್ರಿಯತೆಗೆ ಸಾಕ್ಷಿಯಾಗಿದೆ. ಕಾದು ನೋಡಿ, ಮುಂದಿನ ನಡೆ ಏನೆಂದು ನಿರ್ಧರಿಸಲಿದ್ದೇನೆ’ ಎಂದು ಅವರು ಹೇಳಿದರು.