<p><strong>ಬೆಂಗಳೂರು:</strong> ಪ್ರತಿಪಕ್ಷಗಳ ಗದ್ದಲಕ್ಕೆ ಬಜೆಟ್ ಅಧಿವೇಶನ ಕಲಾಪ ಬಲಿಯಾಗಿದ್ದನ್ನು ಖಂಡಿಸಿ ಬಿಜೆಪಿ ಮುಖಂಡರು ಇಲ್ಲಿನ ಆನಂದರಾವ್ ವೃತ್ತದಲ್ಲಿ ಗುರುವಾರ ಉಪವಾಸ ಸತ್ಯಾಗ್ರಹ ನಡೆಸಿದರು.</p>.<p>ಕೇಂದ್ರ ಸಚಿವರಾದ ಅನಂತಕುಮಾರ್, ಪ್ರಕಾಶ್ ಜಾವಡೇಕರ್, ರಾಜ್ಯದ ಬಿಜೆಪಿ ಉಸ್ತುವಾರಿ ಮುರಳೀಧರರಾವ್ ಸೇರಿ ಹಲವು ಮುಖಂಡರು ಸತ್ಯಾಗ್ರಹದಲ್ಲಿ ಪಾಲ್ಗೊಂಡಿದ್ದರು.</p>.<p>‘ಕಲಾಪದಿಂದ ಪಲಾಯನ ಮಾಡಿದ್ದಾರೆ. ನೃತ್ಯ ಗೊತ್ತಿಲ್ಲದವರು ವೇದಿಕೆ ಸರಿಯಿಲ್ಲ ಎಂದು ದೂರುತ್ತಿದ್ದಾರೆ. ಇಂಥ ಲಜ್ಜೆಗೆಟ್ಟ ಕೆಲಸವನ್ನು ಕಾಂಗ್ರೆಸ್ ಅಲ್ಲದೆ, ಇನ್ಯಾವ ಪಕ್ಷವೂ ಮಾಡಲು ಸಾಧ್ಯವಿಲ್ಲ’ ಎಂದು ಡಿ.ವಿ.ಸದಾನಂದಗೌಡ ಆಕ್ರೋಶ ವ್ಯಕ್ತಪಡಿಸಿದರು.</p>.<p>* ಬಿಜೆಪಿ–ಕಾಂಗ್ರೆಸ್ ನಡುವೆ ಸೈದ್ಧಾಂತಿಕ ಯುದ್ಧ ಶುರುವಾಗಿದೆ. ಅವರ ವಂಶಪಾರಂಪರ್ಯ ಆಡಳಿತದ ವಿರುದ್ಧ ಸಮರ ಸಾರಿದ್ದೇವೆ</p>.<p><em><strong>–ಪ್ರಕಾಶ್ ಜಾವಡೇಕರ್, ಸಚಿವ</strong></em></p>.<p>* ಸಿದ್ದರಾಮಯ್ಯ ಮೀನು–ಮಾಂಸ ಸೇವಿಸಿ ಉಪವಾಸ ಕೂತರೆ, ರಾಹುಲ್ ಚೋಲ ಬಟೂರ ತಿಂದು ಉಪವಾಸ ಸತ್ಯಾಗ್ರಹ ಮಾಡುತ್ತಾರೆ. ನಮ್ಮದು ಅಂತ ಹೋರಾಟವಲ್ಲ</p>.<p><em><strong>–ಎಚ್.ಎನ್. ಅನಂತಕುಮಾರ್</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಪ್ರತಿಪಕ್ಷಗಳ ಗದ್ದಲಕ್ಕೆ ಬಜೆಟ್ ಅಧಿವೇಶನ ಕಲಾಪ ಬಲಿಯಾಗಿದ್ದನ್ನು ಖಂಡಿಸಿ ಬಿಜೆಪಿ ಮುಖಂಡರು ಇಲ್ಲಿನ ಆನಂದರಾವ್ ವೃತ್ತದಲ್ಲಿ ಗುರುವಾರ ಉಪವಾಸ ಸತ್ಯಾಗ್ರಹ ನಡೆಸಿದರು.</p>.<p>ಕೇಂದ್ರ ಸಚಿವರಾದ ಅನಂತಕುಮಾರ್, ಪ್ರಕಾಶ್ ಜಾವಡೇಕರ್, ರಾಜ್ಯದ ಬಿಜೆಪಿ ಉಸ್ತುವಾರಿ ಮುರಳೀಧರರಾವ್ ಸೇರಿ ಹಲವು ಮುಖಂಡರು ಸತ್ಯಾಗ್ರಹದಲ್ಲಿ ಪಾಲ್ಗೊಂಡಿದ್ದರು.</p>.<p>‘ಕಲಾಪದಿಂದ ಪಲಾಯನ ಮಾಡಿದ್ದಾರೆ. ನೃತ್ಯ ಗೊತ್ತಿಲ್ಲದವರು ವೇದಿಕೆ ಸರಿಯಿಲ್ಲ ಎಂದು ದೂರುತ್ತಿದ್ದಾರೆ. ಇಂಥ ಲಜ್ಜೆಗೆಟ್ಟ ಕೆಲಸವನ್ನು ಕಾಂಗ್ರೆಸ್ ಅಲ್ಲದೆ, ಇನ್ಯಾವ ಪಕ್ಷವೂ ಮಾಡಲು ಸಾಧ್ಯವಿಲ್ಲ’ ಎಂದು ಡಿ.ವಿ.ಸದಾನಂದಗೌಡ ಆಕ್ರೋಶ ವ್ಯಕ್ತಪಡಿಸಿದರು.</p>.<p>* ಬಿಜೆಪಿ–ಕಾಂಗ್ರೆಸ್ ನಡುವೆ ಸೈದ್ಧಾಂತಿಕ ಯುದ್ಧ ಶುರುವಾಗಿದೆ. ಅವರ ವಂಶಪಾರಂಪರ್ಯ ಆಡಳಿತದ ವಿರುದ್ಧ ಸಮರ ಸಾರಿದ್ದೇವೆ</p>.<p><em><strong>–ಪ್ರಕಾಶ್ ಜಾವಡೇಕರ್, ಸಚಿವ</strong></em></p>.<p>* ಸಿದ್ದರಾಮಯ್ಯ ಮೀನು–ಮಾಂಸ ಸೇವಿಸಿ ಉಪವಾಸ ಕೂತರೆ, ರಾಹುಲ್ ಚೋಲ ಬಟೂರ ತಿಂದು ಉಪವಾಸ ಸತ್ಯಾಗ್ರಹ ಮಾಡುತ್ತಾರೆ. ನಮ್ಮದು ಅಂತ ಹೋರಾಟವಲ್ಲ</p>.<p><em><strong>–ಎಚ್.ಎನ್. ಅನಂತಕುಮಾರ್</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>