<p><strong>ಹಾಸನ:</strong> ನೀತಿಸಂಹಿತೆ ಜಾರಿಯಲ್ಲಿದ್ದರೂ ಸರ್ಕಾರಿ ಭೂಮಿ ಮಂಜೂರಾತಿ ಕಡತಕ್ಕೆ ಸಹಿ ಹಾಕಿರುವ ಆರೋಪ ಎದುರಿಸುತ್ತಿರುವ ಸಚಿವ ಎ.ಮಂಜು ಅವರು ಚುನಾವಣಾ ಅಧಿಕಾರಿ ನೀಡಿದ್ದ ನೋಟಿಸ್ಗೆ ಉತ್ತರ ನೀಡಿದ್ದಾರೆ. </p>.<p>ಅರಕಲಗೂಡಿನ ಆರ್.ಓ.ವೆಂಕಟರಮಣ ರೆಡ್ಡಿ ಏ.7 ರಂದು ಸಚಿವರಿಗೆ ನೋಟಿಸ್ ನೀಡಿದ್ದರು. ಅದಕ್ಕೆ ಉತ್ತರಿಸುವ ಗಡುವು ಸಹ ಈಗ ಮುಗಿದಿದೆ. </p>.<p>ಉತ್ತರ ನೀಡದಿದ್ದರೆ ಏಕಪಕ್ಷೀಯವಾಗಿ ಎಫ್ಐಆರ್ ದಾಖಲಾಗುವ ಸಾಧ್ಯತೆ ಇರುವುದರಿಂದ ಸಚಿವರು ಗುರುವಾರ ಲಿಖಿತ ಉತ್ತರ ನೀಡಿದ್ದಾರೆ. </p>.<p>ಜಿಲ್ಲಾ ಚುನಾವಣಾ ಅಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಇಂದು ಆರ್.ಓ. ಜೊತೆ ಚರ್ಚೆ ನಡೆಸಲಿದ್ದಾರೆ. ಸಚಿವರ ಉತ್ತರ ಪರಿಶೀಲಿಸಿ ಕ್ರಮ ಜರುಗಿಸುವ ಸಾಧ್ಯತೆ ಇದೆ. </p>.<p>ಅರಕಲಗೂಡು ವ್ಯಾಪ್ತಿಯ ಬಗರ್ ಹುಕುಂ ಸಾಗುವಳಿದಾರರ 1,093 ಕಡತಗಳನ್ನು ನೀತಿಸಂಹಿತೆ ಘೋಷಣೆ ಬಳಿಕ ಹಿಂದಿನ ದಿನಾಂಕ ನಮೂದಿಸಿ ಸಹಿ ಮಾಡಿದ್ದಾರೆ ಎಂಬ ಆರೋಪವನ್ನು ಎ.ಮಂಜು ಎದುರಿಸುತ್ತಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾಸನ:</strong> ನೀತಿಸಂಹಿತೆ ಜಾರಿಯಲ್ಲಿದ್ದರೂ ಸರ್ಕಾರಿ ಭೂಮಿ ಮಂಜೂರಾತಿ ಕಡತಕ್ಕೆ ಸಹಿ ಹಾಕಿರುವ ಆರೋಪ ಎದುರಿಸುತ್ತಿರುವ ಸಚಿವ ಎ.ಮಂಜು ಅವರು ಚುನಾವಣಾ ಅಧಿಕಾರಿ ನೀಡಿದ್ದ ನೋಟಿಸ್ಗೆ ಉತ್ತರ ನೀಡಿದ್ದಾರೆ. </p>.<p>ಅರಕಲಗೂಡಿನ ಆರ್.ಓ.ವೆಂಕಟರಮಣ ರೆಡ್ಡಿ ಏ.7 ರಂದು ಸಚಿವರಿಗೆ ನೋಟಿಸ್ ನೀಡಿದ್ದರು. ಅದಕ್ಕೆ ಉತ್ತರಿಸುವ ಗಡುವು ಸಹ ಈಗ ಮುಗಿದಿದೆ. </p>.<p>ಉತ್ತರ ನೀಡದಿದ್ದರೆ ಏಕಪಕ್ಷೀಯವಾಗಿ ಎಫ್ಐಆರ್ ದಾಖಲಾಗುವ ಸಾಧ್ಯತೆ ಇರುವುದರಿಂದ ಸಚಿವರು ಗುರುವಾರ ಲಿಖಿತ ಉತ್ತರ ನೀಡಿದ್ದಾರೆ. </p>.<p>ಜಿಲ್ಲಾ ಚುನಾವಣಾ ಅಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಇಂದು ಆರ್.ಓ. ಜೊತೆ ಚರ್ಚೆ ನಡೆಸಲಿದ್ದಾರೆ. ಸಚಿವರ ಉತ್ತರ ಪರಿಶೀಲಿಸಿ ಕ್ರಮ ಜರುಗಿಸುವ ಸಾಧ್ಯತೆ ಇದೆ. </p>.<p>ಅರಕಲಗೂಡು ವ್ಯಾಪ್ತಿಯ ಬಗರ್ ಹುಕುಂ ಸಾಗುವಳಿದಾರರ 1,093 ಕಡತಗಳನ್ನು ನೀತಿಸಂಹಿತೆ ಘೋಷಣೆ ಬಳಿಕ ಹಿಂದಿನ ದಿನಾಂಕ ನಮೂದಿಸಿ ಸಹಿ ಮಾಡಿದ್ದಾರೆ ಎಂಬ ಆರೋಪವನ್ನು ಎ.ಮಂಜು ಎದುರಿಸುತ್ತಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>