<p><strong>ಕಲಬುರ್ಗಿ:</strong> ‘ಡಾ.ಬಿ.ಆರ್.ಅಂಬೇಡ್ಕರ್ ಜಯಂತಿಯಲ್ಲಿ ಪಾಲ್ಗೊಳ್ಳಲು ಗುರುವಾರ ರಾತ್ರಿ ನಗರಕ್ಕೆ ಬಂದಿದ್ದ ಪ್ರಕಾಶ್ ರೈ ಅವರು ತಡರಾತ್ರಿ ಹೈದರಾಬಾದ್ಗೆ ತೆರಳಿದ್ದಾರೆ. ಅಲ್ಲಿಂದ ಹೆಲಿಕಾಪ್ಟರ್ನಲ್ಲಿ ಬರಲು ಅನುಮತಿ ನೀಡಬೇಕು’ ಎಂದು ಒತ್ತಾಯಿಸಿ ಜಯಂತ್ಯುತ್ಸವ ಸಮಿತಿ ಸದಸ್ಯರು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.</p>.<p>‘ಊಟಕ್ಕೆ ತೆರಳಿದ್ದ ಸಂದರ್ಭದಲ್ಲಿ ಕೆಲವರು ರೈ ಕಾರಿಗೆ ಮುತ್ತಿಗೆ ಹಾಕಿದರು. ಇದರಿಂದ ವಿಚಲಿತರಾದ ಅವರು ಅಲ್ಲಿಂದ ಹೊರಬಂದರು. ಅನಾಹುತಕ್ಕೆ ಎಡೆಮಾಡಿ ಕೊಡಬಾರದು ಎಂಬ ಉದ್ದೇಶದಿಂದ ಅವರನ್ನು ಹೈದರಾಬಾದ್ಗೆ ಕಳುಹಿಸಿದ್ದೇವೆ’ ಎಂದು ಜಯಂತ್ಯುತ್ಸವ ಸಮಿತಿ ಅಧ್ಯಕ್ಷ ರಾಜು ಕಪನೂರ ಪ್ರಜಾವಾಣಿಗೆ ತಿಳಿಸಿದರು.</p>.<p><strong>ಪ್ರಕಾಶ್ ರೈ ಕಾರಿಗೆ ಮುತ್ತಿಗೆ ಖಂಡಿಸಿ ಪ್ರತಿಭಟನೆ<br /> ಕಲಬುರ್ಗಿ: </strong>ಇಲ್ಲಿನ ಆಫೀಸರ್ಸ್ ಕ್ಲಬ್ ಬಳಿ ಚಿತ್ರ ನಟ ಪ್ರಕಾಶ್ ರೈ ಕಾರಿಗೆ ಮುತ್ತಿಗೆ ಹಾಕಿರುವುದನ್ನು ಖಂಡಿಸಿ ದಲಿತಪರ ಸಂಘಟನೆಗಳ ಮುಖಂಡರು ನಗರದ ಜಗತ್ ವೃತ್ತದಲ್ಲಿ ಶುಕ್ರವಾರ ಪ್ರತಿಭಟನೆ ಮಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರ್ಗಿ:</strong> ‘ಡಾ.ಬಿ.ಆರ್.ಅಂಬೇಡ್ಕರ್ ಜಯಂತಿಯಲ್ಲಿ ಪಾಲ್ಗೊಳ್ಳಲು ಗುರುವಾರ ರಾತ್ರಿ ನಗರಕ್ಕೆ ಬಂದಿದ್ದ ಪ್ರಕಾಶ್ ರೈ ಅವರು ತಡರಾತ್ರಿ ಹೈದರಾಬಾದ್ಗೆ ತೆರಳಿದ್ದಾರೆ. ಅಲ್ಲಿಂದ ಹೆಲಿಕಾಪ್ಟರ್ನಲ್ಲಿ ಬರಲು ಅನುಮತಿ ನೀಡಬೇಕು’ ಎಂದು ಒತ್ತಾಯಿಸಿ ಜಯಂತ್ಯುತ್ಸವ ಸಮಿತಿ ಸದಸ್ಯರು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.</p>.<p>‘ಊಟಕ್ಕೆ ತೆರಳಿದ್ದ ಸಂದರ್ಭದಲ್ಲಿ ಕೆಲವರು ರೈ ಕಾರಿಗೆ ಮುತ್ತಿಗೆ ಹಾಕಿದರು. ಇದರಿಂದ ವಿಚಲಿತರಾದ ಅವರು ಅಲ್ಲಿಂದ ಹೊರಬಂದರು. ಅನಾಹುತಕ್ಕೆ ಎಡೆಮಾಡಿ ಕೊಡಬಾರದು ಎಂಬ ಉದ್ದೇಶದಿಂದ ಅವರನ್ನು ಹೈದರಾಬಾದ್ಗೆ ಕಳುಹಿಸಿದ್ದೇವೆ’ ಎಂದು ಜಯಂತ್ಯುತ್ಸವ ಸಮಿತಿ ಅಧ್ಯಕ್ಷ ರಾಜು ಕಪನೂರ ಪ್ರಜಾವಾಣಿಗೆ ತಿಳಿಸಿದರು.</p>.<p><strong>ಪ್ರಕಾಶ್ ರೈ ಕಾರಿಗೆ ಮುತ್ತಿಗೆ ಖಂಡಿಸಿ ಪ್ರತಿಭಟನೆ<br /> ಕಲಬುರ್ಗಿ: </strong>ಇಲ್ಲಿನ ಆಫೀಸರ್ಸ್ ಕ್ಲಬ್ ಬಳಿ ಚಿತ್ರ ನಟ ಪ್ರಕಾಶ್ ರೈ ಕಾರಿಗೆ ಮುತ್ತಿಗೆ ಹಾಕಿರುವುದನ್ನು ಖಂಡಿಸಿ ದಲಿತಪರ ಸಂಘಟನೆಗಳ ಮುಖಂಡರು ನಗರದ ಜಗತ್ ವೃತ್ತದಲ್ಲಿ ಶುಕ್ರವಾರ ಪ್ರತಿಭಟನೆ ಮಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>