ಕಳೆದ ವರ್ಷದ ಡಿಸೆಂಬರ್ನಲ್ಲಿ ನವದೆಹಲಿಯಲ್ಲಿ ನಡೆದಿದ್ದ 20ನೇ ಸುತ್ತಿನ ಮಾತುಕತೆಯಲ್ಲಿ ಯಾಂಗ್ ಭಾಗವಹಿಸಿದ್ದರು. ಆಗ ಮಾತುಕತೆ ಮೂಲಕವೇ ಸಮಸ್ಯೆ ಬಗೆಹರಿಸಿಕೊಳ್ಳಲು ಎರಡೂ ದೇಶಗಳು ನಿರ್ಧರಿಸಿದ್ದವು. ಆಗಿನಿಂದ ಎರಡೂ ದೇಶಗಳು ಚೀನಾ–ಪಾಕಿಸ್ತಾನ ಆರ್ಥಿಕ ಕಾರಿಡಾರ್, ಅಣ್ವಸ್ತ್ರ ಪೂರೈಕೆದಾರ ರಾಷ್ಟ್ರಗಳ ಗುಂಪಿಗೆ ಭಾರತದ ಸೇರ್ಪಡೆ, ಜೈಷ್–ಎ–ಮಹಮ್ಮದ್ ಉಗ್ರ ಸಂಘಟನೆಯ ಮುಖ್ಯಸ್ಥ ಮಸೂದ್ ಅಜರ್ನನ್ನು ವಿಶ್ವಸಂಸ್ಥೆಯು ಭಯೋತ್ಪಾದಕ ಎಂದು ಘೋಷಿಸಬೇಕು ಎಂಬುದೂ ಸೇರಿದಂತೆ ವಿವಿಧ ವಿಷಯಗಳ ಭಿನ್ನಾಭಿಪ್ರಾಯ
ಗಳನ್ನು ಹೋಗಲಾಡಿಸಲು ಪ್ರಯತ್ನಿಸುತ್ತಿವೆ.