<p><strong>ಬೆಂಗಳೂರು: </strong>ಹಾಸನ ಜಿಲ್ಲಾ ಚುನಾವಣಾಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಪಶುಸಂಗೋಪನಾ ಸಚಿವ ಎ.ಮಂಜು ನೀಡಿರುವ ದೂರು ಆಧಾರ ರಹಿತ ಎಂದು ಚುನಾವಣಾ ಆಯೋಗ ತಳ್ಳಿಹಾಕಿದೆ.</p>.<p>‘ರೋಹಿಣಿ ಸಿಂಧೂರಿ ನನ್ನ ಘನತೆ ಮತ್ತು ವ್ಯಕ್ತಿತ್ವಕ್ಕೆ ಕುಂದುಂಟು ಮಾಡುವ ಹೇಳಿಕೆಗಳನ್ನು ನೀಡಿದ್ದಾರೆ. ಆದ್ದರಿಂದ ಅವರನ್ನು ವರ್ಗಾವಣೆ ಮಾಡಬೇಕು’ ಎಂದು ಸಚಿವ ಮಂಜು ಇದೇ 7 ರಂದು ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ಅವರಿಗೆ ದೂರು ನೀಡಿದ್ದರು.</p>.<p>ಸಚಿವ ಮಂಜು ಚುನಾವಣಾ ಮಾದರಿ ನೀತಿ ಸಂಹಿತೆ ಉಲ್ಲಂಘಿಸಿ ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿಯಲ್ಲಿ ಕೆಲಸಗಳನ್ನು ಮಾಡುತ್ತಿದ್ದರು. ಅಲ್ಲದೆ, ಒಂದು ಸಾವಿರ ಕುಟುಂಬಗಳಿಗೆ ಸರ್ಕಾರದ ಭೂಮಿ ಹಂಚುವ ಕಾರ್ಯದಲ್ಲಿ ತೊಡಗಿದ್ದರ ಆರೋಪದ ಮೇಲೆ ಸಚಿವರ ವಿರುದ್ಧ ರೋಹಿಣಿ ಪ್ರಕರಣ ದಾಖಲಿಸಿದ್ದರು.</p>.<p>ಮಂಜು ನೀಡಿದ ದೂರಿನ ಬಗ್ಗೆ ವಿಚಾರಣೆ ನಡೆಸಿ ವರದಿ ನೀಡುವಂತೆ ಮೈಸೂರು ವಿಭಾಗೀಯ ಆಯುಕ್ತರಿಗೆ ಮುಖ್ಯ ಚುನಾವಣಾಧಿಕಾರಿ ಸೂಚಿಸಿದ್ದರು. ಆದರೆ, ಸಚಿವರು ಮಾಡಿರುವ ಆರೋಪಗಳು ಆಧಾರ ರಹಿತ ಎಂದು ಅವರು ವರದಿ ನೀಡಿದ್ದಾರೆ ಎಂದು ಸಂಜೀವ್ ಕುಮಾರ್ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಹಾಸನ ಜಿಲ್ಲಾ ಚುನಾವಣಾಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಪಶುಸಂಗೋಪನಾ ಸಚಿವ ಎ.ಮಂಜು ನೀಡಿರುವ ದೂರು ಆಧಾರ ರಹಿತ ಎಂದು ಚುನಾವಣಾ ಆಯೋಗ ತಳ್ಳಿಹಾಕಿದೆ.</p>.<p>‘ರೋಹಿಣಿ ಸಿಂಧೂರಿ ನನ್ನ ಘನತೆ ಮತ್ತು ವ್ಯಕ್ತಿತ್ವಕ್ಕೆ ಕುಂದುಂಟು ಮಾಡುವ ಹೇಳಿಕೆಗಳನ್ನು ನೀಡಿದ್ದಾರೆ. ಆದ್ದರಿಂದ ಅವರನ್ನು ವರ್ಗಾವಣೆ ಮಾಡಬೇಕು’ ಎಂದು ಸಚಿವ ಮಂಜು ಇದೇ 7 ರಂದು ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ಅವರಿಗೆ ದೂರು ನೀಡಿದ್ದರು.</p>.<p>ಸಚಿವ ಮಂಜು ಚುನಾವಣಾ ಮಾದರಿ ನೀತಿ ಸಂಹಿತೆ ಉಲ್ಲಂಘಿಸಿ ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿಯಲ್ಲಿ ಕೆಲಸಗಳನ್ನು ಮಾಡುತ್ತಿದ್ದರು. ಅಲ್ಲದೆ, ಒಂದು ಸಾವಿರ ಕುಟುಂಬಗಳಿಗೆ ಸರ್ಕಾರದ ಭೂಮಿ ಹಂಚುವ ಕಾರ್ಯದಲ್ಲಿ ತೊಡಗಿದ್ದರ ಆರೋಪದ ಮೇಲೆ ಸಚಿವರ ವಿರುದ್ಧ ರೋಹಿಣಿ ಪ್ರಕರಣ ದಾಖಲಿಸಿದ್ದರು.</p>.<p>ಮಂಜು ನೀಡಿದ ದೂರಿನ ಬಗ್ಗೆ ವಿಚಾರಣೆ ನಡೆಸಿ ವರದಿ ನೀಡುವಂತೆ ಮೈಸೂರು ವಿಭಾಗೀಯ ಆಯುಕ್ತರಿಗೆ ಮುಖ್ಯ ಚುನಾವಣಾಧಿಕಾರಿ ಸೂಚಿಸಿದ್ದರು. ಆದರೆ, ಸಚಿವರು ಮಾಡಿರುವ ಆರೋಪಗಳು ಆಧಾರ ರಹಿತ ಎಂದು ಅವರು ವರದಿ ನೀಡಿದ್ದಾರೆ ಎಂದು ಸಂಜೀವ್ ಕುಮಾರ್ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>