‘ಅರಣ್ಯಗಳ ವ್ಯಾಪ್ತಿಯಲ್ಲಿ ರಾಷ್ಟ್ರೀಯ ಹೆದ್ದಾರಿಗಳ ವಿಸ್ತರಣೆ, ರೈಲ್ವೆ ಯೋಜನೆಗಳಿಗೆ ಅನುಮತಿ, ಜಲಾಶಯ ಮತ್ತು ಜಲ ವಿದ್ಯುತ್ ಘಟಕಗಳ ಸ್ಥಾಪನೆ, ಗಣಿಗಾರಿಕೆ ಚಟುವಟಿಕೆಗಳಿಗೆ ನಿಯಮ ಮೀರಿ ಅನುಮತಿ ನೀಡಲಾಗುತ್ತಿದೆ. ಒಂದು ವೇಳೆ ಹೊಸ ಅರಣ್ಯ ಕರಡು ನೀತಿಯು ಸಂಪೂರ್ಣವಾಗಿ ಅನುಷ್ಠಾನಗೊಂಡರೆ, ರಾಜ್ಯಗಳು ಕಾಡುಗಳ ಮೇಲಿನ ನಿಯಂತ್ರಣವನ್ನು ಕಳೆದುಕೊಳ್ಳಲಿವೆ’ ಎಂದು ಎಚ್ಚರಿಸಿದರು.