<p><strong>ನವದೆಹಲಿ</strong>: ಕಠುವಾ ಅತ್ಯಾಚಾರ ಪ್ರಕರಣದ ವಿಶೇಷ ತನಿಖಾ ತಂಡವು ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಲು ಕೆಲವು ವಕೀಲರು ಅಡ್ಡಿಪಡಿಸಿದ್ದು ನ್ಯಾಯದಾನ ಪ್ರಕ್ರಿಯೆಯಲ್ಲಿ ಆದ ಗಂಭೀರ ಲೋಪ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ.</p>.<p>ಈ ಸಂಬಂಧ ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡಿರುವ ಸುಪ್ರೀಂ ಕೋರ್ಟ್, ‘ಇದು ನ್ಯಾಯದ ನಿರಾಕರಣೆ ಅಲ್ಲದೆ ಮತ್ತೇನಲ್ಲ. ವಕೀಲರೇ ಈ ಕೆಲಸ ಮಾಡಬಾರದು’ ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಸುಪ್ರೀಂ ಕೋರ್ಟ್ನ ಕೆಲವು ವಕೀಲರ ಮನವಿಯ ಮೇರೆಗೆ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ, ನ್ಯಾಯಮೂರ್ತಿಗಳಾದ ಎ.ಎಂ.ಖಾನ್ವಿಲ್ಕರ್ ಮತ್ತು ಡಿ.ವೈ. ಚಂದ್ರಚೂಡ್ ಅವರಿದ್ದ ಪೀಠವು ಪ್ರಕರಣ ದಾಖಲಿಸಿಕೊಂಡಿತು.</p>.<p>‘ಆರೋಪಿ ಅಥವಾ ಸಂತ್ರಸ್ತರಲ್ಲಿ ಯಾರನ್ನೇ ಆಗಲಿ ನ್ಯಾಯಾಲಯಕ್ಕೆ ಹಾಜರುಪಡಿಸುವಾಗ, ಅದಕ್ಕೆ ಅಡ್ಡಿಪಡಿಸದೇ ಇರುವುದು ವಕೀಲರು ಮತ್ತು ವಕೀಲರ ಸಂಘಗಳ ಪ್ರಾಥಮಿಕ ಕರ್ತವ್ಯ’ ಎಂದು ಪೀಠ ಅಭಿಪ್ರಾಯಪಟ್ಟಿದೆ.</p>.<p>ಕಠುವಾ ವಕೀಲರು ತನಿಖಾಧಿಕಾರಿಗಳಿಗೆ ಅಡ್ಡಿಪಡಿಸಿದ ಬಗ್ಗೆ ಏಪ್ರಿಲ್ 19ರಂದು ವಿವರಣೆ ನೀಡುವಂತೆ ಭಾರತೀಯ ವಕೀಲರ ಸಂಘ, ಜಮ್ಮು ಮತ್ತು ಕಾಶ್ಮೀರ ವಕೀಲರ ಸಂಘ, ಕಠುವಾ ಜಿಲ್ಲಾ ವಕೀಲರ ಸಂಘಗಳಿಗೆ ಪೀಠ ಸೂಚನೆ ನೀಡಿದೆ.</p>.<p>**</p>.<p>ಆರೋಪಪಟ್ಟಿ ಸಲ್ಲಿಸುವುದಕ್ಕೆ ಅಡ್ಡಿಪಡಿಸಿದ್ದು ಅನೈತಿಕತೆಯೇ ಸರಿ. ನ್ಯಾಯಾಂಗ ಪ್ರಕ್ರಿಯೆಗೆ ವಕೀಲರೇ ಅಡ್ಡಿಪಡಿಸುವುದನ್ನು ಕ್ಷಮಿಸಲು ಸಾಧ್ಯವೇ ಇಲ್ಲ<br /> <em><strong>–ಸುಪ್ರೀಂ ಕೋರ್ಟ್</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಕಠುವಾ ಅತ್ಯಾಚಾರ ಪ್ರಕರಣದ ವಿಶೇಷ ತನಿಖಾ ತಂಡವು ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಲು ಕೆಲವು ವಕೀಲರು ಅಡ್ಡಿಪಡಿಸಿದ್ದು ನ್ಯಾಯದಾನ ಪ್ರಕ್ರಿಯೆಯಲ್ಲಿ ಆದ ಗಂಭೀರ ಲೋಪ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ.</p>.<p>ಈ ಸಂಬಂಧ ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡಿರುವ ಸುಪ್ರೀಂ ಕೋರ್ಟ್, ‘ಇದು ನ್ಯಾಯದ ನಿರಾಕರಣೆ ಅಲ್ಲದೆ ಮತ್ತೇನಲ್ಲ. ವಕೀಲರೇ ಈ ಕೆಲಸ ಮಾಡಬಾರದು’ ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಸುಪ್ರೀಂ ಕೋರ್ಟ್ನ ಕೆಲವು ವಕೀಲರ ಮನವಿಯ ಮೇರೆಗೆ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ, ನ್ಯಾಯಮೂರ್ತಿಗಳಾದ ಎ.ಎಂ.ಖಾನ್ವಿಲ್ಕರ್ ಮತ್ತು ಡಿ.ವೈ. ಚಂದ್ರಚೂಡ್ ಅವರಿದ್ದ ಪೀಠವು ಪ್ರಕರಣ ದಾಖಲಿಸಿಕೊಂಡಿತು.</p>.<p>‘ಆರೋಪಿ ಅಥವಾ ಸಂತ್ರಸ್ತರಲ್ಲಿ ಯಾರನ್ನೇ ಆಗಲಿ ನ್ಯಾಯಾಲಯಕ್ಕೆ ಹಾಜರುಪಡಿಸುವಾಗ, ಅದಕ್ಕೆ ಅಡ್ಡಿಪಡಿಸದೇ ಇರುವುದು ವಕೀಲರು ಮತ್ತು ವಕೀಲರ ಸಂಘಗಳ ಪ್ರಾಥಮಿಕ ಕರ್ತವ್ಯ’ ಎಂದು ಪೀಠ ಅಭಿಪ್ರಾಯಪಟ್ಟಿದೆ.</p>.<p>ಕಠುವಾ ವಕೀಲರು ತನಿಖಾಧಿಕಾರಿಗಳಿಗೆ ಅಡ್ಡಿಪಡಿಸಿದ ಬಗ್ಗೆ ಏಪ್ರಿಲ್ 19ರಂದು ವಿವರಣೆ ನೀಡುವಂತೆ ಭಾರತೀಯ ವಕೀಲರ ಸಂಘ, ಜಮ್ಮು ಮತ್ತು ಕಾಶ್ಮೀರ ವಕೀಲರ ಸಂಘ, ಕಠುವಾ ಜಿಲ್ಲಾ ವಕೀಲರ ಸಂಘಗಳಿಗೆ ಪೀಠ ಸೂಚನೆ ನೀಡಿದೆ.</p>.<p>**</p>.<p>ಆರೋಪಪಟ್ಟಿ ಸಲ್ಲಿಸುವುದಕ್ಕೆ ಅಡ್ಡಿಪಡಿಸಿದ್ದು ಅನೈತಿಕತೆಯೇ ಸರಿ. ನ್ಯಾಯಾಂಗ ಪ್ರಕ್ರಿಯೆಗೆ ವಕೀಲರೇ ಅಡ್ಡಿಪಡಿಸುವುದನ್ನು ಕ್ಷಮಿಸಲು ಸಾಧ್ಯವೇ ಇಲ್ಲ<br /> <em><strong>–ಸುಪ್ರೀಂ ಕೋರ್ಟ್</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>