ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಪಘಾತ: ಸ್ಥಳದಲ್ಲೇ ಮೂವರ ದುರ್ಮರಣ

Last Updated 14 ಏಪ್ರಿಲ್ 2018, 9:32 IST
ಅಕ್ಷರ ಗಾತ್ರ

ಚಾಮರಾಜನಗರ: ಇಲ್ಲಿನ ಸೋಮವಾರ ಪೇಟೆ ಬಳಿ ಕಾರು ಮತ್ತು ಲಾರಿ ನಡುವೆ ಶನಿವಾರ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಮಕ್ಕಳು ಸೇರಿದಂತೆ ಮೂವರು ಮೃತಪಟ್ಟಿದ್ದಾರೆ.

ಮುಸುಕಿನ ಜೋಳ ತುಂಬಿದ ಲಾರಿ ನಿಯಂತ್ರಣ ತಪ್ಪಿ ನಿಂತಿದ್ದ ಕಾರಿನ ಮೇಲೆ ಮಗುಚಿ ಬಿದ್ದ ಪರಿಣಾಮ ಚಾಲಕ ಮತ್ತು ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.

ಮೃತರು ವಿಜಯಪುರ ಜಿಲ್ಲೆ ಇಂಡಿ ತಾಲ್ಲೂಕಿನ ಕೂಳೂರಗಿ ಗ್ರಾಮದ ಮೂಲದವರು. ಇವರು ತಮಿಳುನಾಡು ಪ್ರವಾಸ ಮುಗಿಸಿ ವಾಪಸ್ಸಾಗುವ ವೇಳೆ ರಸ್ತೆ ಬದಿ ಕಾರು ನಿಲ್ಲಿಸಿ ಎಳನೀರು ಕುಡಿಯುತ್ತಿದ್ದರು. ಈ ಸಮಯದಲ್ಲಿ ತಮಿಳುನಾಡಿಗೆ ಜೋಳ ತುಂಬಿಕೊಂಡು ಹೋಗುತ್ತಿದ್ದ ಲಾರಿ ಕಾರಿನ ಮೇಲೆ ಬಿದ್ದು ಅವಘಡ ಸಂಭವಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT