‘ಅಂಬೇಡ್ಕರ್ ನಮ್ಮವರು ಎನ್ನುತ್ತಲೇ ಅವರ ಸಿದ್ಧಾಂತ, ಸಂವಿಧಾನ ಹಾಗೂ ಪ್ರಜಾತಂತ್ರವನ್ನು ನಿರ್ನಾಮ ಮಾಡಲು ಹುನ್ನಾರ ನಡೆಸಿದ್ದಾರೆ. ಅಂಬೇಡ್ಕರ್ ಅವರಿಗೆ ನಾವು ನೀಡಿದಷ್ಟು ಗೌರವ ಬೇರೆ ಯಾರೂ ನೀಡಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳುತ್ತಾರೆ. ಆದರೆ, ಅಂಬೇಡ್ಕರ್ ಬಗ್ಗೆ ಅವಹೇಳನ ಮಾಡುವುದು, ಅವರ ಪ್ರತಿಮೆಗಳನ್ನು ಭಗ್ನಗೊಳಿಸುವ ಪ್ರಯತ್ನಗಳು ನಡೆಯುತ್ತಿವೆ. ದಲಿತರ ಮೇಲೆ ದೌರ್ಜನ್ಯ, ಅತ್ಯಾಚಾರ ನಡೆಯುತ್ತಿದೆ. ಇದರ ಬಗ್ಗೆ ಮೋದಿ ಮಾತನಾಡುವುದಿಲ್ಲ’ ಎಂದು ಕಿಡಿಕಾರಿದರು.