ಕನ್ನಡಿಗರಿಗೆ ಉದ್ಯೋಗ ನೀಡುವಲ್ಲಿ ರಾಷ್ಟ್ರೀಯ ನೀತಿ ಆಗಬೇಕು. ಸರೋಜಿನಿ ಮಹಿಷಿ ವರದಿ ಕಾನೂನು ಆಗಿ ಜಾರಿ ಆಗಬೇಕು, ರಾಜ್ಯದಲ್ಲಿ ಸೃಷ್ಟಿಯಾಗುವ ಎಲ್ಲ ಕೆಲಸಗಳಲ್ಲಿ ಕನ್ನಡಿಗರಿಗೇ ಆದ್ಯತೆ ನೀಡಬೇಕು. ಕನ್ನಡಿಗರನ್ನು ಉದ್ಯಮಶೀಲರನ್ನಾಗಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು. ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಕನ್ನಡಿಗರೇ ಹೆಚ್ಚಾಗಿ ಆಯ್ಕೆಯಾಗಲು ಬೇಕಾದ ತರಬೇತಿ ಶಿಬಿರಗಳನ್ನು ಸರ್ಕಾರ ತೆರೆಯಬೇಕು. ಸ್ಥಳೀಯ ಭಾಷೆಯಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ನಡೆಯಬೇಕು. ರಾಜ್ಯ/ಕೇಂದ್ರ ಸರ್ಕಾರಿ ಸ್ವಾಮ್ಯದ ಉದ್ಯಮಗಳನ್ನು ಪುನರುಜ್ಜೀವನಗೊಳಿಸಬೇಕು ಎಂದು ಒತ್ತಾಯಿಸಿದರು.