ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿ ಅಧಿಕಾರಕ್ಕೆ ಬಂದರೆ ಖರ್ಗೆ ಕುಟುಂಬದ ಆಸ್ತಿ ತನಿಖೆ: ಮಾಲೀಕಯ್ಯ ಗುತ್ತೇದಾರ

Last Updated 14 ಏಪ್ರಿಲ್ 2018, 20:10 IST
ಅಕ್ಷರ ಗಾತ್ರ

ಚಿತ್ತಾಪುರ (ಕಲಬುರ್ಗಿ ಜಿಲ್ಲೆ): ‘ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದರೆ ಕಾಂಗ್ರೆಸ್‌ ಮುಖಂಡ ಮಲ್ಲಿಕಾರ್ಜುನ ಖರ್ಗೆ ಅವರ ಕುಟುಂಬದ ಆಸ್ತಿಯನ್ನು ಸಿಬಿಐನಿಂದ ತನಿಖೆ ಮಾಡಿಸುತ್ತೇವೆ’ ಎಂದು ಬಿಜೆಪಿ ಮುಖಂಡ ಮಾಲೀಕಯ್ಯ ಗುತ್ತೇದಾರ ಶನಿವಾರ ಗುಡುಗಿದರು.

ಪಟ್ಟಣದಲ್ಲಿ ಬಿಜೆಪಿ ಆಯೋಜಿಸಿದ್ದ ಸನ್ಮಾನ ಮತ್ತು ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ‘ಕಲಬುರ್ಗಿಯಲ್ಲಿ ಬುದ್ಧ ವಿಹಾರವನ್ನು ನಿರ್ಮಿಸಲು ₹900 ಕೋಟಿ ದೇಣಿಗೆ ಹಣ ಬಂದಿದೆ. ಅದಕ್ಕೆ ಖರ್ಚಾಗಿದ್ದು ₹35 ಕೋಟಿ ಮಾತ್ರ. ಉಳಿದ ಹಣ ಎಲ್ಲಿಗೆ ಹೋಯಿತು’ ಎಂದು ಪ್ರಶ್ನಿಸಿದರು.

‘ಖರ್ಗೆ ಅವರ ಕುಟುಂಬದವರೇ ಸದಸ್ಯರಾಗಿರುವ ಟ್ರಸ್ಟ್ ರಚಿಸಿಕೊಂಡಿದ್ದಾರೆ. ಅಲ್ಲದೇ ಅವರ ಕುಟುಂಬದವರು ಸಣ್ಣ ರೈತರು ಎಂದು ಭೂಮಿ ಪಡೆದಿರುವ ದಾಖಲೆ ಇದೆ. ಈ ಕುರಿತು ಸಿಬಿಐ ತನಿಖೆಯಿಂದ ಸತ್ಯ ಬಯಲಿಗೆ ಎಳೆಯುತ್ತೇವೆ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT