ನಂತರ ದೊಡ್ಡಮಂಗಡಿ ಮಾರ್ಗವಾಗಿ ರಾಮದುರ್ಗದ ಕುದುರೆ ಬಯಲಿನಲ್ಲಿ ಹಮ್ಮಿಕೊಂಡಿದ್ದ ಮುಖ್ಯ ವೇದಿಕೆಗೆ ಪಾದಯಾತ್ರೆ ತಲುಪಿತು. ಈ ಸಂದರ್ಭದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪಿ.ಸಿ.ಮೋಹನ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಿದ್ಲಿಂಗಪ್ಪ ಶಿಂಗಾರಗೊಪ್ಪ, ಪುರಸಭೆ ಅಧ್ಯಕ್ಷ ಅಶೋಕ ಸೂಳಿಬಾಂವಿ, ಸದಸ್ಯರಾದ ರಾಜು ಮಾನೆ, ಕಾಂಗ್ರೆಸ್ ಯುವ ಘಟಕದ ಅಧ್ಯಕ್ಷ ರಮೇಶ ಬಂಡಿವಡ್ಡರ, ಹೆಸ್ಕಾಂ ನಿರ್ದೇಶಕ ಮಹಾಂತೇಶ ಉಮತಾರ, ಖಾದಿ ಮಂಡಳಿ ನಿರ್ದೇಶಕ ಜಯಪ್ರಕಾಶ ಸಿಂಧೆ, ಎಪಿಎಂಸಿ ಅಧ್ಯಕ್ಷ ಬಿ.ಎಂ.ಪಾಟೀಲ, ಬಸವರಾಜ್ ಪ್ಯಾಟಿಗೌಡ್ರ, ಜಿ.ಬಿ. ರಂಗನಗೌಡ್ರ, ಬಾಳಪ್ಪ ಹಂಜಿ ಸೇರಿದಂತೆ ನೂರಾರು ಬೆಂಬಲಿಗರು ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದರು. ಕುದುರೆ ಬಯಲಿನಲ್ಲಿ ಬಹಿರಂಗ ಸಭೆ ಏರ್ಪಡಿಸಲಾಗಿತ್ತು.