ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೇಶದಲ್ಲಿ ಅಸ್ಪೃಶ್ಯತೆ ತಾಂಡವ: ಕಳವಳ

ಡಾ.ಬಿ.ಆರ್. ಅಂಬೇಡ್ಕರ್ ಜನ್ಮದಿನಾಚರಣೆ
Last Updated 15 ಏಪ್ರಿಲ್ 2018, 6:29 IST
ಅಕ್ಷರ ಗಾತ್ರ

ಯಳಂದೂರು: ಪಟ್ಟಣದ ಸೇರಿದಂತೆ ವಿವಿಧೆಡೆ ಡಾ.ಬಿ.ಆರ್. ಅಂಬೇಡ್ಕರ್ ರವರ 127ನೇ ಜಯಂತಿಯನ್ನು ಶನಿವಾರ ಸಡಗರ ಸಂಭ್ರಮದಿಂದ ಆಚರಿಸಲಾಯಿತು.

ಪಟ್ಟಣದ ಡಾ.ಬಿ.ಆರ್. ಅಂಬೇಡ್ಕರ್ ಭನವದ ಮುಂಭಾಗ ತಾಲ್ಲೂಕು ಸೇವಾ ಸಮಿತಿ ಹಾಗೂ ವಿವಿಧ ಪ್ರಗತಿಪರ ಸಂಘಟನೆಗಳ ವತಿಯಿಂದ ಕೇಕ್ ಕತ್ತರಿಸುವ ಮೂಲಕ ಜಯಂತಿ ಆಚರಿಸಲಾಯಿತು.

ಟಿಎಪಿಸಿಎಂಎಸ್ ಅಧ್ಯಕ್ಷ ವಡಗೆರೆದಾಸ್ ಮಾತನಾಡಿ, ಅಂಬೇಡ್ಕರ್‌ ಮಾನವೀಯ ಮೌಲ್ಯಗಳನ್ನು ಜಗತ್ತಿಗೆ ಬಿತ್ತರಿಸಿದ ಮಹಾನ್‌ ಶಕ್ತಿಯಾಗಿದ್ದಾರೆ. ಇಂತಹ ಮಹಾನ್ ನಾಯಕನ ಜನ್ಮದಿನವನ್ನು ವಿಶ್ವಸಂಸ್ಥೆಯೂ ಆಚರಿಸುತ್ತಿರುವುದು ಭಾರತೀಯರ ಹೆಮ್ಮೆಯಾಗಿದೆ ಎಂದರು.

ಇಂಥ ನಾಯಕ ಹುಟ್ಟಿದ ದೇಶದಲ್ಲಿ ಶೋಷಿತ ಸಮಾಜಗಳ ಉದ್ಧಾರಕ್ಕಾಗಿ ರೂಪಿಸಿದ ಕಾನೂನುಗಳು ಪರಿಣಾಮಕಾರಿಯಾಗಿ ಜಾರಿಯಾಗಿಲ್ಲ. ದೇಶದಲ್ಲಿ ಅಸ್ಪೃಶ್ಯತೆ ತಾಂಡವ ಆಡುತ್ತಿದೆ. ಎಲ್ಲೆಲ್ಲೂ ಜಾತಿ, ಧರ್ಮಗಳನ್ನು ಎತ್ತಿಕಟ್ಟುವ ಕೆಲಸಗಳು ನಡೆಯುತ್ತಿವೆ. ಇದರ ನಿರ್ಮೂಲನೆಗೆ ಪ್ರತಿಯೊಬ್ಬರೂ ಪಣತೊಡುವ ದಿನ ಸನ್ನಿಹಿತವಾಗಿದೆ. ಈ ನಿಟ್ಟಿನಲ್ಲಿ ಎಲ್ಲರೂ ಯೋಚಿಸಬೇಕು ಎಂದು ಸಲಹೆ ನೀಡಿದರು.

ಅಂಬೇಡ್ಕರ್ ಸೇವಾ ಸಮಿತಿಯ ತಾಲ್ಲೂಕು ಅಧ್ಯಕ್ಷ ರೇವಣ್ಣ, ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕ ಯರಿಯೂರು ರಾಜಣ್ಣ ತಾ.ಪಂ ಅಧ್ಯಕ್ಷ ನಂಜುಂಡಯ್ಯ, ಸದಸ್ಯ ನಿರಂಜನ್ ಪ.ಪಂ ಸದಸ್ಯ ಜೆ.ಶ್ರೀನಿವಾಸ್ ಕೆ. ಮಲ್ಲಯ್ಯ ಎಪಿಎಂಸಿ ನಿರ್ದೇಶಕ ಚಿಕ್ಕಮಾದಯ್ಯ ಗ್ರಾ.ಪಂ ಸದಸ್ಯ ಹೊನ್ನೂರು ಪುಟ್ಟಸ್ವಾಮಿ, ಕೆಸ್ತೂರು ಸಿದ್ದರಾಜು, ಶಾಂತರಾಜು, ಲಿಂಗರಾಜಮೂರ್ತಿ, ಎ.ಎನ್. ನಾಗೇಂದ್ರ, ಮಧು, ಅನಂತ್ ಮದ್ದೂರು, ನೀಲಯ್ಯ, ಬಿ. ಲಿಂಗರಾಜು ಇತರರು ಇದ್ದರು.

ವಿವಿಧೆಡೆ ಆಚರಣೆ: ತಾಲ್ಲೂಕಿನ ಯರಿಯೂರು, ಮದ್ದೂರು, ಮಾಂಬಳ್ಳಿ, ಅಂಬಳೆ, ಗುಂಬಳ್ಳಿ, ಯರಗಂಬಳ್ಳಿ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಜಯಂತಿಯನ್ನು ಸಂಭ್ರಮದಿಂದ ಆಚರಿಸಲಾಯಿತು.

ಪಟ್ಟಣ ಸಾರ್ವಜನಿಕ ಆಸ್ಪತ್ರೆ, ಪೊಲೀಸ್ ಠಾಣೆ, ಸಮಾಜಕಲ್ಯಾಣ ಇಲಾಖೆ, ಕಂದಾಯ ಇಲಾಖೆ ಸೇರಿದಂತೆ ವಿವಿಧ ಕಚೇರಿಗಳಲ್ಲಿ ಆಚರಣೆ ನೆರವೇರಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT