ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜನಬೆಂಬಲ ನೋಡಿ ಸ್ವತಂತ್ರ ಸ್ಪರ್ಧೆ ಬಗ್ಗೆ ನಿರ್ಧಾರ: ಬಿ.ಶಿವರಾಮು

ಕಾಂಗ್ರೆಸ್‌ ಟಿಕೆಟ್‌ ನೀಡದಿರುವುದು ಕಾರ್ಯಕರ್ತರಲ್ಲಿ ನೋವು ತಂದಿದೆ
Last Updated 16 ಏಪ್ರಿಲ್ 2018, 4:25 IST
ಅಕ್ಷರ ಗಾತ್ರ

ಹಾಸನ: ನಾನು ಬೇಲೂರಿನಿಂದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದು ನಿಜ. ‌ಟಿಕೆಟ್ ಕೈ ತಪ್ಪಿದ್ದರಿಂದ ನನಗಿಂತ ಕಾರ್ಯಕರ್ತರಿಗೆ ಹೆಚ್ಚಿನ ನೋವಾಗಿದೆ ಎಂದು ಕೆಪಿಸಿಸಿ ಉಪಾಧ್ಯಕ್ಷ ಹಾಗೂ ಮಾಜಿ ಸಚಿವ ಬಿ.ಶಿವರಾಮು ಸೋಮವಾರ ಹೇಳಿದರು.

ಇಂದೇ ಬೇಲೂರಿಗೆ ತೆರಳಿ ಕಾರ್ಯಕರ್ತರು, ಮುಖಂಡರ ಅಭಿಪ್ರಾಯ ಪಡೆದು ಮುಂದಿನ ನಿರ್ಧಾರ ಕೈಗೊಳ್ಳುವೆ. ಜನಬೆಂಬಲ ನೋಡಿ ಸ್ವತಂತ್ರ ಸ್ಪರ್ಧೆ ಬಗ್ಗೆ ನಿರ್ಧಾರ ತೆಗೆದುಕೊಳ್ಳುತ್ತೇನೆ ಎಂದರು.

ನಾನು ಈವರೆಗೂ ಕಾಂಗ್ರೆಸ್‌ನಲ್ಲಿ ಶಿಸ್ತಿನ ಸಿಪಾಯಿ, ನನಗೆ ಟಿಕೆಟ್ ಕೈ ತಪ್ಪಲು ಉಸ್ತುವಾರಿ ಸಚಿವ ಎ.ಮಂಜು ಕಾರಣ ಎಂಬ ಕಾರ್ಯಕರ್ತರ ಆರೋಪ ಸರಿ ಇರಬಹುದು. ಬೇಲೂರಿನಲ್ಲಿ ಕಾಂಗ್ರೆಸ್ ಗೆಲ್ಲುತ್ತೆ, ಸೋಲುತ್ತೆ ಅಂತ ಈಗಲೇ ಹೇಳಲಾಗದು ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT