ಬೀದರ್: ಬಸವ ಜಯಂತಿ ಅಂಗವಾಗಿ ಲಿಂಗಾಯತರು ಹಾಗೂ ಬಸವಾಭಿಮಾನಿಗಳು ನಗರದಲ್ಲಿ ಭಾನುವಾರ ಬೈಕ್ ರ್ಯಾಲಿ ನಡೆಸಿದರು. ನಗರದ ನೆಹರೂ ಕ್ರೀಡಾಂಗಣದಿಂದ ಆರಂಭವಾದ ರ್ಯಾಲಿ ಡಾ.ಬಿ.ಆರ್. ಅಂಬೇಡ್ಕರ್ ವೃತ್ತ, ಮಹಾವೀರ ವೃತ್ತ, ಬಸವೇಶ್ವರ ವೃತ್ತ, ಬೊಮ್ಮಗೊಂಡೇಶ್ವರ ವೃತ್ತ, ಮೈಲೂರು ಕ್ರಾಸ್, ಬಿ.ವಿ. ಭೂಮರೆಡ್ಡಿ ಕಾಲೇಜು, ಕುಂಬಾರವಾಡ ಕ್ರಾಸ್, ಗುಂಪಾ, ಮೈಲೂರು, ಮೈಲೂರು ಕ್ರಾಸ್, ಬೊಮ್ಮಗೊಂಡೇಶ್ವರ ವೃತ್ತ, ಶಿವಾಜಿ ವೃತ್ತ, ಹರಳಯ್ಯ ವೃತ್ತ, ಕೆಇಬಿ ಕಚೇರಿ, ಕೇಂದ್ರ ಬಸ್ ನಿಲ್ದಾಣ, ಶಿವನಗರದ ಮೂಲಕ ತೆರಳಿ ಪಾಪನಾಶ ದೇವಸ್ಥಾನದ ಬಳಿ ಸಮಾರೋಪಗೊಂಡಿತು.