</p><p><strong>ಎಚ್.ವೈ.ಮೇಟಿಗೆ ಟಿಕೆಟ್: ಟೈರ್ಗೆ ಬೆಂಕಿ ಹಚ್ಚಿ ಆಕ್ರೋಶ</strong></p><p>ಮಾಜಿ ಶಾಸಕ ಪಿ.ಹೆಚ್.ಪೂಜಾರ ಅವರಿಗೆ ಕಾಂಗ್ರೆಸ್ ಟಿಕೆಟ್ ಕೈ ತಪ್ಪಿದ ಹಿನ್ನಲೆಯಲ್ಲಿ ಬೆಂಬಲಿಗರು ನಗರದಲ್ಲಿರುವ ಕೆಪಿಸಿಸಿ ಕಾರ್ಯಾಧ್ಯಕ್ಷ ಎಸ್.ಆರ್.ಪಾಟೀಲ್ ಮನೆ ಎದುರು ಪ್ರತಿಭಟನೆ ನಡೆಸಿದರು.</p><p>ಟೈರ್ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು.</p><p>ಕಳಂಕಿತ ಶಾಸಕ ಎಚ್.ವೈ.ಮೇಟಿ ಅವರಿಗೆ ಟಿಕೆಟ್ ಕೊಟ್ಟಿರುವುದು ಸರಿಯಲ್ಲ. ಇದು ನನ್ನ ಕೊನೆಯ ಚುನಾವಣೆ. ಮುಂದಿನ ಬಾರಿ ನಿನಗೆ ಟಿಕೆಟ್ ಕೊಡಿಸುವೆ ಎಂದು ಹೇಳಿ ಕಳೆದ ಚುನಾವಣೆಯಲ್ಲಿ ಪೂಜಾರ ಬೆಂಬಲ ಪಡೆದು ಆಯ್ಕೆಯಾಗಿದ್ದ ಮೇಟಿ ವಚನ ಭ್ರಷ್ಟರಾಗಿದ್ದಾರೆ ಎಂದು ಆರೋಪಿಸಿದರು.</p><p>ಈ ಹಿಂದೆ ಬಿಜೆಪಿ, ಜೆಡಿಎಸ್ ನಿಂದ ಸ್ಪರ್ಧಿಸಿದ್ದ ಪೂಜಾರ ಕಳೆದ ಬಾರಿ ಕಾಂಗ್ರೆಸ್ ಸೇರ್ಪಡೆಯಾಗಿದ್ದರು.</p><p><strong>ಕಾರ್ಯಕರ್ತರ ನಿರ್ಧಾರಕ್ಕೆ ಬದ್ಧ: ಬಸವರಾಜ ಶಿವಣ್ಣವರ</strong></p><p><strong>ಹಾವೇರಿ: </strong>ನಾನು ಕಾರ್ಯಕರ್ತರ ನಿರ್ಧಾರಕ್ಕೆ ಬದ್ಧ ಎಂದು ಬ್ಯಾಡಗಿ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ವಂಚಿತ ಶಾಸಕ ಬಸವರಾಜ ಶಿವಣ್ಣವರ ತಿಳಿಸಿದರು.</p><p>ಬೆಂಗಳೂರು ಅಥವಾ ಎಲ್ಲಿಂದ ಬೇಕಾದರೂ ನಾಯಕರು ಕರೆ ಮಾಡಲಿ. ನಾನು ಮಾತ್ರ ಬೆಂಬಲಿಗರು ಮತ್ತು ಕ್ಷೇತ್ರದ ಕಾರ್ಯಕರ್ತರು ಹೇಳಿದಂತೆ ನಡೆದುಕೊಳ್ಳುತ್ತೇನೆ ಎಂದರು.</p><p>ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತೀರಾ ಎಂಬ ಪ್ರಶ್ನೆಗೆ, ಕ್ಷೇತ್ರದ ಕಾರ್ಯಕರ್ತರ ಯಾವುದೇ ನಿರ್ಧಾರಕ್ಕೆ ನಾನು ಬದ್ಧ ಎಂದರು.</p></p>