ತಮಟೆವಾದ್ಯ ಗಳೊಂದಿಗೆ ನೂರಾರು ಜನರು ಮೆರವಣಿಗೆಯಲ್ಲಿ ಭಾಗವಹಿಸಿದ್ದರು. ಬೆಂಗಳೂರು ವೃತ್ತ, ಕೆನರಾ ಬ್ಯಾಂಕ್ ರಸ್ತೆ, ಗಜಾನನ ವೃತ್ತ, ಎಂ.ಜಿ.ರಸ್ತೆ, ಪಿಸಿಆರ್ ಕಾಂಪ್ಲೆಕ್ಸ್, ಚೇಳೂರು ವೃತ್ತ, ಸರ್ಕಾರಿ ಬಸ್ ನಿಲ್ದಾಣದ ಮೂಲಕ ಮೆರವಣಿಗೆ ಸಾಗಿತು. ವೃತ್ತಗಳಲ್ಲಿ ವಿವಿಧ ಸಂಘ ಸಂಸ್ಥೆಗಳ ಸಂಘಟನೆಯ ಕಾರ್ಯಕರ್ತರು ಕುಣಿದು ಕುಪ್ಪಳಿಸಿದರು.