ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಾಸಕರಾದ ರಾಜೇಶ್, ಶಿವಮೂರ್ತಿಗೆ ಕೊಕ್‌

ಶಾಮನೂರು ಸೇರಿ ಐವರು ಶಾಸಕರಿಗೆ ಟಿಕೆಟ್‌: ಜಗಳೂರಿನಿಂದ ಪುಷ್ಪಾಗೆ ಅವಕಾಶ
Last Updated 16 ಏಪ್ರಿಲ್ 2018, 7:20 IST
ಅಕ್ಷರ ಗಾತ್ರ

ದಾವಣಗೆರೆ: ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್‌ ಅಭ್ಯರ್ಥಿಗಳ ಪಟ್ಟಿ ಪ್ರಕಟವಾಗಿದ್ದು, ಜಗಳೂರು ಶಾಸಕ ರಾಜೇಶ್‌ ಹಾಗೂ ಮಾಯಕೊಂಡ ಶಾಸಕ ಕೆ. ಶಿವಮೂರ್ತಿ ಅವರಿಗೆ ಟಿಕೆಟ್‌ ನಿರಾಕರಿಸಲಾಗಿದೆ.

ಐವರು ಹಾಲಿ ಶಾಸಕರಿಗೆ ಟಿಕೆಟ್‌: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ ದಿಂದ ಶಾಮನೂರು ಶಿವಶಂಕರಪ್ಪ, ಉತ್ತರ ವಿಧಾನಸಭಾ ಕ್ಷೇತ್ರದಿಂದ ಎಸ್‌.ಎಸ್‌. ಮಲ್ಲಿಕಾರ್ಜುನ, ಚನ್ನಗಿರಿ ಕ್ಷೇತ್ರದಿಂದ ವಡ್ನಾಳ್‌ ರಾಜಣ್ಣ, ಹೊನ್ನಾಳಿ ಕ್ಷೇತ್ರದಿಂದ ಡಿ.ಜಿ. ಶಾಂತನಗೌಡ, ಹರಪನಹಳ್ಳಿ ಕ್ಷೇತ್ರದಿಂದ ಎಂ.ಪಿ. ರವೀಂದ್ರ ಅವರಿಗೆ ಟಿಕೆಟ್‌ ನೀಡಲಾಗಿದೆ. ಹರಿಹರ ಕ್ಷೇತ್ರದಿಂದ ಹಿರಿಯ ಮುಖಂಡ ಎಸ್‌. ರಾಮಪ್ಪ ಅವರಿಗೂ ಟಿಕೆಟ್‌ ಸಿಕ್ಕಿದೆ.

ಪ್ರತಿಭಟನೆ: ಜಗಳೂರು ಕ್ಷೇತ್ರದಿಂದ ಶಾಸಕ ಎಚ್‌.ಪಿ.ರಾಜೇಶ್‌ಗೆ ಟಿಕೆಟ್‌ ತಪ್ಪಿದ ಹಿನ್ನೆಲೆಯಲ್ಲಿ ಅವರ ಬೆಂಬಲಿಗರು ಜಿಲ್ಲಾ ಉಸ್ತುವಾರಿ ಸಚಿವರ ನಿವಾಸದ ಎದುರು ಪ್ರತಿಭಟನೆ ನಡೆಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT