ಐವರು ಹಾಲಿ ಶಾಸಕರಿಗೆ ಟಿಕೆಟ್: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ ದಿಂದ ಶಾಮನೂರು ಶಿವಶಂಕರಪ್ಪ, ಉತ್ತರ ವಿಧಾನಸಭಾ ಕ್ಷೇತ್ರದಿಂದ ಎಸ್.ಎಸ್. ಮಲ್ಲಿಕಾರ್ಜುನ, ಚನ್ನಗಿರಿ ಕ್ಷೇತ್ರದಿಂದ ವಡ್ನಾಳ್ ರಾಜಣ್ಣ, ಹೊನ್ನಾಳಿ ಕ್ಷೇತ್ರದಿಂದ ಡಿ.ಜಿ. ಶಾಂತನಗೌಡ, ಹರಪನಹಳ್ಳಿ ಕ್ಷೇತ್ರದಿಂದ ಎಂ.ಪಿ. ರವೀಂದ್ರ ಅವರಿಗೆ ಟಿಕೆಟ್ ನೀಡಲಾಗಿದೆ. ಹರಿಹರ ಕ್ಷೇತ್ರದಿಂದ ಹಿರಿಯ ಮುಖಂಡ ಎಸ್. ರಾಮಪ್ಪ ಅವರಿಗೂ ಟಿಕೆಟ್ ಸಿಕ್ಕಿದೆ.