ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವೋಟು ಕುಮಾರಸ್ವಾಮಿ ಜೇಬಿನಲ್ಲಿ ಇಲ್ಲ: ಸಿ.ಎಂ. ಸಿದ್ದರಾಮಯ್ಯ ತಿರುಗೇಟು

Last Updated 16 ಏಪ್ರಿಲ್ 2018, 7:38 IST
ಅಕ್ಷರ ಗಾತ್ರ

ಮೈಸೂರು: ಚುನಾವಣೆಯಲ್ಲಿ ಸೋಲು ಮತ್ತು ಗೆಲುವನ್ನು ಮತದಾರ ನಿರ್ಧಾರ ಮಾಡುತ್ತಾರೆ. ವೋಟುಗಳು ಎಚ್.ಡಿ.ಕುಮಾರಸ್ವಾಮಿ ಜೇಬಿನಲ್ಲಿ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದರು.

ಚಾಮುಂಡೇಶ್ವರಿ ಕ್ಷೇತ್ರದಲ್ಲಿ 2ನೇ ಹಂತದ ಪ್ರಚಾರದಲ್ಲಿರುವ ಅವರು ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದರು.

‘ಎಷ್ಟು ಪ್ರಚಾರ ಮಾಡಿದರೂ ಗೆಲ್ಲಲು ಸಾಧ್ಯವಿಲ್ಲ ಎಂದು ಹೇಳಲು ಕುಮಾರಸ್ವಾಮಿ ಯಾರು? ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಇಂತಹ ಹೇಳಿಕೆ ನೀಡಬಾರದು. ಮೊಯಿಲಿ ವಿರುದ್ಧ ಅವರು ಸೋಲು ಕಂಡಿರಲಿಲ್ಲವೆ’ ಎಂದು ಪ್ರಶ್ನಿಸಿದರು.

2006ರಲ್ಲಿ ನಡೆದ ಉಪ ಚುನಾವಣೆಯ ಸಂದರ್ಭದಲ್ಲಿಯೂ ಕುಮಾರಸ್ವಾಮಿ ನನ್ನ ವಿರುದ್ಧ ಪ್ರಚಾರ ಮಾಡಿದ್ದರು. ಆದರೆ ಗೆದ್ದಿದ್ದು ಮಾತ್ರ ನಾನೇ. ಈಗಲೂ ಇದು ಮರುಕಳಿಸುತ್ತದೆ ಎಂದು ಹೇಳಿದರು.

ಬಾದಾಮಿ ಕ್ಷೇತ್ರದಲ್ಲಿ ಸ್ಪರ್ಧೆ ಮಾಡುತ್ತೇನೆ ಎಂದು ನಾನು ಎಲ್ಲಿಯೂ ಹೇಳಿರಲಿಲ್ಲ. ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಮಾತ್ರ ಸ್ಫರ್ಧೆ ಮಾಡುತ್ತೇನೆ. ಏ.20ರಂದು ನಾಮಪತ್ರ ಸಲ್ಲಿಸುತ್ತೇನೆ ಎಂದು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT