ಚಿಕ್ಕೋಡಿ: ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಜಯಂತಿ ನಿಮಿತ್ತ ತಾಲ್ಲೂಕಿನ ನಾಗರಾಳದಲ್ಲಿ ಸೋಮವಾರ ಸಂಜೆ ನಡೆದ ಮೆರವಣಿಗೆ ವೇಳೆ ದಲಿತ ಮತ್ತು ಮಾಳಿ, ಮರಾಠಾ ಸಮುದಾಯದವರ ಅವರ ಮಧ್ಯೆ ಕಲ್ಲು ತೂರಾಟ ನಡೆದಿದ್ದು, ಘಟನೆಯಲ್ಲಿ 15ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. ಗಾಯಗೊಂಡಿರುವವರನ್ನು ಚಿಕ್ಕೋಡಿಯ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ.