ತೀರ್ಪು ನೀಡಿದ ಕೆಲವೇ ಗಂಟೆಯಲ್ಲಿ ಎನ್ಐಎ ವಿಶೇಷ ನ್ಯಾಯಾಧೀಶ ಕೆ. ರವೀಂದ್ರ ರೆಡ್ಡಿ ರಾಜೀನಾಮೆ ಸಲ್ಲಿಸಿದ್ದಾರೆ. ಅವರ ಈ ಹಠಾತ್ ನಿರ್ಧಾರ ಆಶ್ಚರ್ಯಕ್ಕೆ ಕಾರಣವಾಗಿದೆ. ರಾಜೀನಾಮೆಗೆ ವೈಯಕ್ತಿಕ ಕಾರಣ ನೀಡಿರುವ ಅವರು, ಆಂಧ್ರ ಪ್ರದೇಶ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ಪ್ರಕರಣದಲ್ಲಿ ಸ್ವಾಮಿ ಅಸೀಮಾನಂದ ಅಲಿಯಾಸ್ ನಾಬಾ ಕುಮಾರ್ ಸರ್ಕಾರ್ ಅವರೊಂದಿಗೆ ದೇವೇಂದರ್ ಗುಪ್ತಾ, ಲೋಕೇಶ್ ಶರ್ಮಾ, ಭರತ್ ಮೋಹನ್ಲಾಲ್ ರಾಠೇಶ್ವರ್ ಅಲಿಯಾಸ್ ಭರತ್ ಭಾಯ್ ಮತ್ತು ರಾಜೇಂದರ್ ಚೌಧರಿ ಅವರನ್ನೂ ನ್ಯಾಯಾಲಯ ಖುಲಾಸೆಗೊಳಿಸಿದೆ.