ಈ ಸಂದರ್ಭದಲ್ಲಿ ವಿಚಾರವಾದಿಗಳ ಸಂಘದ ಅಧ್ಯಕ್ಷ ಡಾ. ನರೇಂದ್ರ ನಾಯಕ್ ಮಾತನಾಡಿ, ‘ಜಮ್ಮು ಕಾಶ್ಮೀರ ಕಠುವಾದಲ್ಲಿ 8 ವರ್ಷದ ಬಾಲಕಿ ಹಾಗೂ ಉತ್ತರ ಪ್ರದೇಶದ ಉನ್ನಾವ್ನಲ್ಲಿ ಅಪ್ರಾಪ್ತ ಬಾಲಕಿಯೊಬ್ಬಳ ಮೇಲೆ ನಡೆದ ಅತ್ಯಾಚಾರ ಮತ್ತು ಕೊಲೆ ಪ್ರಕರಣವು ಮನುಷ್ಯತ್ವಕ್ಕೆ ವಿರುದ್ಧವಾದದ್ದು. ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು’ ಎಂದು ಹೇಳಿದರು.