ಈ ಬಗ್ಗೆ ಸುದ್ದಿಗಾರರ ಜತೆ ಮಂಗಳವಾರ ಮಾತನಾಡಿದ ಅಬಕಾರಿ ಇಲಾಖೆ ಜಿಲ್ಲಾ ಅಧಿಕಾರಿ ಎಲ್.ಎ.ಮಂಜುನಾಥ, 'ಆರೋಪಿಗಳು ತಮ್ಮ ತೋಟದ ಮನೆಯ ಅಟ್ಟದಲ್ಲಿ ಗೋಲ್ಡನ್ ಏಸ್ ಫೈಲ್ ವಿಸ್ಕಿಯ 50 ಕೇಸ್ ಗಳನ್ನು ಚುನಾವಣಾ ಸಂದರ್ಭದಲ್ಲಿ ಹಂಚುವ ಸಲುವಾಗಿ ಸಂಗ್ರಹಿಸಿಟ್ಟುಕೊಂಡಿದ್ದರು. ಈ ಬಗ್ಗೆ ಜಿಲ್ಲಾಧಿಕಾರಿ ನೀಡಿದ ಮಾಹಿತಿ ಪ್ರಕಾರ ದಾಂಡೇಲಿ ಅಬಕಾರಿ ನಿರೀಕ್ಷಕಿ ಕವಿತಾ ಮತ್ತು ಅವರ ತಂಡ ದಾಳಿ ಮಾಡಿತು. ತಡರಾತ್ರಿ ಕಾರ್ಯಾಚರಣೆ ನಡೆದಿದ್ದು, ಆರೋಪಿಗಳನ್ನು ಮುಂಜಾನೆ ಬಂಧಿಸಲಾಯಿತು. ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲು ಕ್ರಮ ಕೈಗೊಳ್ಳಲಾಗಿದೆ' ಎಂದು ತಿಳಿಸಿದರು.