ಲೈಂಗಿಕ ಕಿರುಕುಳ ಮತ್ತು ಕೊಲೆಯಂತಹ ಕೃತ್ಯಗಳಿಂದ ಶಾಲೆಗೆ ಹೋಗುವ ಮಕ್ಕಳಿಗೆ ರಕ್ಷಣೆ ಇರಬೇಕು. ಯಾವುದೇ ರಾಜಿ ಇಲ್ಲದ ರೀತಿಯ ಸುರಕ್ಷತಾ ವ್ಯವಸ್ಥೆಯನ್ನು ಅಳವಡಿಸಿಕೊಳ್ಳಬೇಕು. ಈಗಾಗಲೇ ಇರುವ ನಿಯಮಗಳನ್ನು ಕಟ್ಟುನಿಟ್ಟಾಗಿ ಅನುಸರಿಸಬೇಕು ಎಂದು ಕೋರಿ ವಕೀಲರಾದ ಅಭಾ ಆರ್. ಶರ್ಮಾ ಮತ್ತು ಸಂಗೀತಾ ಭಾರ್ತಿ ಅವರು ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು.